ಮೃತಪಟ್ಟ ಯುವಕ ಶರತ್ 
ರಾಜ್ಯ

ಉಡುಪಿ: ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ

ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.

ಉಡುಪಿ: ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.

ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದ ಬಳಿ ಸ್ನೇಹಿತನೊಂದಿಗೆ ರೀಲ್ಸ್ ಮಾಡಲು ಹೋಗಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಯುವಕ ಶರತ್ ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. 

ಆದರೆ ಧಾರಾಕಾರ ಮಳೆ, ಧುಮ್ಮುಕ್ಕಿ ಹರಿಯುವ ಜಲಪಾತದ ಅಬ್ಬರದಿಂದ ಯುವಕ ಪತ್ತೆ ಆಗಿರಲಿಲ್ಲ. ಆದರೂ. ಮುಳುಗು ತಜ್ಞರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಳೆದ ಒಂದು ವಾರದಿಂದ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ್ದರು. ಕೊನೆಗೂ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಜಲಾಶಯದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲಿಕಿತ್ತು ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!