ಸಾಂದರ್ಭಿಕ ಚಿತ್ರ 
ರಾಜ್ಯ

ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತ ದಂಪತಿ.

ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಬ್ಬರು, ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಆದರೆ ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆದು ತನಿಖೆ ನಡೆಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಮೃತದೇಹಗಳು ಪತ್ತೆಯಾಗಿದ್ದು, ತಕ್ಷಣ ತೋಟದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವಿಜಯಪುರ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel