ಇಂಧನ ಸಚಿವ ಕೆ.ಜೆ ಜಾರ್ಜ್ 
ರಾಜ್ಯ

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್

ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಚಿಕ್ಕಮಗಳೂರು: ಪ್ರತಿಯೊಂದು ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯೋಜನೆಯಡಿ ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್‌ಗೆ ಫಲಾನುಭವಿಗಳು ಶುಲ್ಕ ಪಾವತಿಸಬೇಕಾಗಿಲ್ಲ ಎಂದರು. 

ಗೃಹ ಜ್ಯೋತಿ ಯೋಜನೆ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ. 1.4 ಕೋಟಿಗೂ ಹೆಚ್ಚು ಗ್ರಾಹಕರು ಈಗಾಗಲೇ ಪ್ರಯೋಜನಕ್ಕಾಗಿ ಅರ್ಜಿ ಸಲ್ಲಿಸಿದ್ದು. ಜುಲೈ ತಿಂಗಳಿನ ವಿದ್ಯುತ್ ಶುಲ್ಕವನ್ನು ಈಗಾಗಲೇ ಪಾವತಿಸಿದವರಿಗೆ ಮರು ಪಾವತಿಸಲಾಗುತ್ತದೆ. ಬಾಕಿ ಇದ್ದಲ್ಲಿ ಅದಕ್ಕೆ ಸರಿಹೊಂದಿಸಲಾಗುತ್ತದೆ. ಜುಲೈ 1 ರಿಂದ 200 ಯೂನಿಟ್ ವರೆಗೂ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದರು. 

ಅರ್ಹ ಗ್ರಾಹಕರ ಮೀಟರ್ ರೀಡಿಂಗ್ ಮತ್ತು ಲೆಕ್ಕಾಚಾರ ಪ್ರಕ್ರಿಯೆಯು ಜುಲೈ 1 ರಂದು ಪ್ರಾರಂಭವಾಗಿದೆ ಎಂದು ಸ್ಪಷ್ಟಪಡಿಸಿದ ಸಚಿವರು, ಯೋಜನೆ ಚಾಲನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

2022-23 ರ ಹಣಕಾಸು ವರ್ಷದ ಬಿಲ್ಲಿಂಗ್ ಕಳೆದ 10 ತಿಂಗಳ ಬಳಕೆಯ ಸರಾಸರಿಯನ್ನು ಆಧರಿಸಿದ್ದು, 200 ಯೂನಿಟ್ ವರೆಗೂ ವಿದ್ಯುತ್ ಬಳಸುವವರಿಗೆ ಶೇ.10 ರಷ್ಟು ಹೆಚ್ಚುವರಿ ಸಬ್ಸಿಡಿಯನ್ನು ಸರ್ಕಾರ ಪ್ರಕಟಿಸಿದೆ. ಆದಾಗ್ಯೂ 200-ಯೂನಿಟ್ ಮಿತಿಯನ್ನು ಮೀರಿದ ಗ್ರಾಹಕರು ಎಂದಿನಂತೆ ತಮ್ಮ ಬಿಲ್‌ಗಳನ್ನು ಪಾವತಿಸಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT