ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ, ಏರ್ ಶೋ ನಡೆಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಈ ವರ್ಷ ಮೈಸೂರು ದಸರಾವನ್ನು "ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ" ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ದಸರಾ ಆಚರಣೆಯ ಭಾಗವಾಗಿ "ಏರ್ ಶೋ" ನಡೆಸಲು ಯೋಚಿಸುತ್ತಿರುವುದಾಗಿ ಮುಖ್ಯಮಂತ್ರಿ...

ಬೆಂಗಳೂರು: ಈ ವರ್ಷ ಮೈಸೂರು ದಸರಾವನ್ನು "ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ" ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ದಸರಾ ಆಚರಣೆಯ ಭಾಗವಾಗಿ "ಏರ್ ಶೋ" ನಡೆಸಲು ಯೋಚಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಇಂದು ಮೈಸೂರು ದಸರಾ ಮಹೋತ್ಸವ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಈ ಬಾರಿ "ನಾಡ ಹಬ್ಬ" ದಸರಾವನ್ನು ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಾಡಬೇಕು ಎಂದು ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷ 5 ಗ್ಯಾರಂಟಿಗಳ ಬಗ್ಗೆ ತಿಳಿಸುವ ಸ್ತಬ್ಧಚಿತ್ರ ಸಹ ಇರಲಿದೆ ಎಂದರು.

ದಸರಾ ಸಾಂಪ್ರದಾಯಿಕ ಹಬ್ಬವಾಗಿದ್ದು, ಅದು ಜನರ ಹಬ್ಬವಾಗಬೇಕು. ವಿಜಯನಗರ ಅರಸರ ಕಾಲದಲ್ಲಿ ಉತ್ಸವ ಹಂಪಿಯಲ್ಲಿ ನಡೆಯುತ್ತಿತ್ತು. ಆಮೇಲೆ ಮೈಸೂರಿನಲ್ಲಿ ರಾಜರುಗಳು ಮಾಡಿಕೊಂಡು ಬಂದರು. ಇದೀಗ ಸರ್ಕಾರ ಆಚರಣೆ ಮಾಡಿಕೊಂಡು ಬರುತ್ತಿದೆ. ಜನರ ಆಕರ್ಷಣೆ ಮಾಡುವುದು, ದೀಪಾಲಂಕಾರ, ಮೆರವಣಿಗೆ, ಜಂಬೂಸವಾರಿ, ಸ್ತಬ್ಧಚಿತ್ರಗಳ ಮೆರವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಈ ಬಾರಿ ಟ್ಯಾಬ್ಲೋಗಳನ್ನು ಆಯ್ಕೆ ಮಾಡುವಾಗ ರಾಜ್ಯದ ಸಂಪ್ರದಾಯಗಳು, ವಿವಿಧ ಜಿಲ್ಲೆಗಳ ವಿಶೇಷ ಅಂಶಗಳು ಮತ್ತು ಸರ್ಕಾರದ ಐದು ಖಾತರಿ ಯೋಜನೆಗಳ ಅನುಷ್ಠಾನದ ಬಗ್ಗೆ ಜನರಿಗೆ ತಿಳಿಸುವಂಥದ್ದನ್ನು ಆಯ್ಕೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ದಸರಾದ ಮತ್ತೊಂದು ಪ್ರಮುಖ ಆಕರ್ಷಣೆ, ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ (ರೈತ) ದಸರಾ ಮತ್ತು ಯುವ (ಯುವ) ದಸರಾ ಈ ವರ್ಷವೂ ಇರುತ್ತವೆ ಎಂದು ಸಿಎಂ ತಿಳಿಸಿದರು.

ಅಕ್ಟೋಬರ್ 15 ರಂದು ಬೆಳಗ್ಗೆ 10.15 ರಿಂದ 10.30 ರ ನಡುವಿನ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗುವುದು ಮತ್ತು ಅದೇ ದಿನ ದಸರಾ ವಸ್ತುಪ್ರದರ್ಶನವೂ ಉದ್ಘಾಟನೆಯಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ದಸರಾ ಪೂರ್ವಭಾವಿ ಸಭೆಯಲ್ಲಿ ಒಬ್ಬರ ಹೆಸರಿನ ಬಗ್ಗೆ ಚರ್ಚೆ ಮಾಡಿದ್ದೇವೆ. ಕೆಆರ್ ಕ್ಷೇತ್ರದ ಶಾಸಕರು ಸುತ್ತೂರು ಶ್ರೀಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ, ಉದ್ಘಾಟಕರ ಹೆಸರು ಅಂತಿಮವಾಗಿಲ್ಲ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಏರ್ ಶೋ ನಡೆಸಲು ಚಿಂತನೆ
ಈ ವರ್ಷ ದಸರಾ ಅಂಗವಾಗಿ ಏರ್ ಶೋ ನಡೆಸುವ ಚಿಂತನೆ ಇದೆ. ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನತೆ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ, ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆ

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ, ಚಿಂತಿಸಬೇಡಿ: ಪಶ್ಚಿಮ-ಏಷ್ಯಾ ಯುದ್ಧದ ನಡುವೆ ಇರಾನ್ ಅಭಯ

ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಉದ್ರಿಕ್ತರು; ದೀದಿ ವಿರುದ್ಧ CJI ಗರಂ

SCROLL FOR NEXT