ಪಕ್ಷದ ಮುಖಂಡರೊಂದಿಗೆ ಹೆಚ್ ಡಿ ಕುಮಾರಸ್ವಾಮಿ ಸಭೆ 
ರಾಜ್ಯ

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಮಹತ್ವದ ಮಾತುಕತೆ ನಡೆಸಿದರು.

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಮಹತ್ವದ ಮಾತುಕತೆ ನಡೆಸಿದರು.

ಬಿಡದಿಯ ತೋಟದಲ್ಲಿ ಕರೆದಿದ್ದ  ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆಗಳನ್ನು ನೀಡಿದರು. ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ, ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ ಎಂದು ಗುಡುಗಿದರು.

ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ, ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ, ಜನರು ಹೆಚ್ಚೆಚ್ಚು ಪಕ್ಷಕ್ಕೆ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ ಎಂದು ಮಾಜಿ ಮುಖ್ಯಮಂತ್ರಿಗಳು ಮುಖಂಡರಿಗೆ ಕಿವಿಮಾತು ಹೇಳಿದರು.

ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಅಧೈರ್ಯ ಬೇಡ. ಅನೇಕ ಸೋಲುಗಳನ್ನು ದಾಟಿಕೊಂಡು ಜೆಡಿಎಸ್ ಪಕ್ಷ ಫೀನಿಕ್ಸ್  ಪಕ್ಷಿಯಂತೆ ಮೇಲೆದ್ದು ಬಂದಿದೆ ಎಂದು ಮುಖಂಡರಿಗೆ ಸ್ಥೈರ್ಯ ತುಂಬಿದರು.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ,ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ಹೇಳಿದರಲ್ಲದೆ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT