ಗೋದಾಮಿನಲ್ಲಿ ಬೆಂಕಿ 
ರಾಜ್ಯ

ಚಾಮುಂಡಿ ಬೆಟ್ಟದ ತಪ್ಪಲಿನ ಗೋದಾಮಿನಲ್ಲಿ ಬೆಂಕಿ-ಅಪಾರ ಪ್ರಮಾಣದ ಪೀಠೋಪಕರಣಗಳು ಧ್ವಂಸ

ಮೈಸೂರು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಸಂಗಮ್ ಶಾಮಿಯಾನ ಹಾಗೂ ಡೆಕೋರೆಟೆಡ್‌ ಗೋದಾಮಿನಲ್ಲಿ ಇಂದು ಗುರುವಾರ ಬೆಳಗಿನ ಜಾವ ಬೆಂಕಿ ಅನಹಾತು ಸಂಭವಿಸಿದೆ. 

ಮೈಸೂರು: ಮೈಸೂರು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಸಂಗಮ್ ಶಾಮಿಯಾನ ಹಾಗೂ ಡೆಕೋರೆಟೆಡ್‌ ಗೋದಾಮಿನಲ್ಲಿ ಇಂದು ಗುರುವಾರ ಬೆಳಗಿನ ಜಾವ ಬೆಂಕಿ ಅನಹಾತು ಸಂಭವಿಸಿದೆ. 

ಜ್ವಾಲೆಗೆ ಅಪಾರ ಮೌಲ್ಯದ ಶಾಮಿಯಾನ ಹಾಗೂ ಡೆಕೋರೇಷನ್ ವಸ್ತುಗಳು ನಾಶವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿ‌ ನಂದಿಸಿದ್ದಾರೆ. ಈ ಗೋಡಾನ್ ಮೈಸೂರು ನಗರದ ಷರಿಫ್ ಎಂಬವರ ಅಳಿಯನಿಗೆ ಸೇರಿದ್ದಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಶಾಮಿಯಾನ ಸಾಮಾಗ್ರಿಗಳನ್ನು ಹೊಂದಿದ್ದರು.

ಸ್ಥಳಕ್ಕೆ ಮೈಸೂರು ನಗರದ ಸರಸ್ವತಿಪುರಂ, ಹೆಬ್ಬಾಳ ಹಾಗೂ ಬನ್ನಿಮಂಟಪದ ಅಗ್ನಿ ಶಾಮಕ ವಾಹನಗಳು ಸಿಬ್ಬಂದಿಯೊಂದಿಗೆ ಆಗಮಿಸಿ, ಸುಮಾರು ಮೂರು ಗಂಟೆಗೂ ಅಧಿಕ ಸಮಯ ಬೆಂಕಿ ನಂದಿಸಲು ತೆಗೆದುಕೊಂಡರು. ಸುತ್ತಮುತ್ತಲಿನ ಪ್ರದೇಶಗಳಿಗೆ ಬೆಂಕಿ ಹರಡದಂತೆ ಅಗ್ನಿ ಶಾಮಕ ದಳದವರು ತಪ್ಪಿಸಿದ್ದಾರೆ. ಕೃಷ್ಣ ರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT