ಡಿಕೆ.ಶಿವಕುಮಾರ್ 
ರಾಜ್ಯ

ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

ಬೆಂಗಳೂರು: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ ಎಂದಿದ್ದಾರೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ ಎಂದು ತಿಳಿಸಿದ್ದಾರೆ.  

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!