ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಹೊರಗೆ ಹಾಕಿದ ವಿಧಾನಸೌಧ ಸಿಬ್ಬಂದಿ 
ರಾಜ್ಯ

ವಿಧಾನಸೌಧ ಕೊಠಡಿಯಿಂದ ಮಾಜಿ ಸಿಎಂಗಳ ಫೋಟೋ ಜೊತೆ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಕೂಡ ಹೊರಕ್ಕೆ: ಬಿಜೆಪಿ ಕೆಂಡ

ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. 

ವಿಧಾನಸೌಧ 3ನೇ ಮಹಡಿಯ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಕೆ.ಎನ್.ರಾಜಣ್ಣ ಅವರ ಕಚೇರಿಗಳಿಂದ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ, ಬಿಎಸ್ ಬೊಮ್ಮಾಯಿ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಫೋಟೋಗಳನ್ನು ತೆರವುಗೊಳಿಸಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

'ಆಡಳಿತ ಪಕ್ಷ ಕಾಂಗ್ರೆಸ್​ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel