ರಾಜ್ಯ

ವಿಧಾನಸೌಧ ಕೊಠಡಿಯಿಂದ ಮಾಜಿ ಸಿಎಂಗಳ ಫೋಟೋ ಜೊತೆ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಕೂಡ ಹೊರಕ್ಕೆ: ಬಿಜೆಪಿ ಕೆಂಡ

Srinivasamurthy VN

ಬೆಂಗಳೂರು: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. 

ವಿಧಾನಸೌಧ 3ನೇ ಮಹಡಿಯ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಕೆ.ಎನ್.ರಾಜಣ್ಣ ಅವರ ಕಚೇರಿಗಳಿಂದ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ, ಬಿಎಸ್ ಬೊಮ್ಮಾಯಿ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಫೋಟೋಗಳನ್ನು ತೆರವುಗೊಳಿಸಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

'ಆಡಳಿತ ಪಕ್ಷ ಕಾಂಗ್ರೆಸ್​ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

SCROLL FOR NEXT