ವಂದೇ ಭಾರತ್ ಎಕ್ಸ್ ಪ್ರೆಸ್ 
ರಾಜ್ಯ

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

ಹುಬ್ಬಳ್ಳಿ: ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

ಹುಬ್ಬಳ್ಳಿ-ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸುವ ಕುರಿತು ಚರ್ಚಿಸಲು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಅವರು ನಿನ್ನೆ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದರು.

ನಂತರ ಟ್ವೀಟ್ ಮಾಡಿರುವ ಸಚಿವ ಪ್ರಹ್ಲಾದ್ ಜೋಶಿ, ರೈಲು ಸೇವೆಯನ್ನು ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಜುಲೈ ವೇಳೆಗೆ ರಾಜ್ಯದಲ್ಲಿ ಎರಡನೇ ವಂದೇ ಭಾರತ್ ರೈಲನ್ನು ಆರಂಭಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. 

ನೈಋತ್ಯ ರೈಲ್ವೆ (SWR) ಮತ್ತು ರೈಲ್ವೆ ವಿದ್ಯುದ್ದೀಕರಣ ಕೇಂದ್ರ ಸಂಸ್ಥೆ (CORE) ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಬಾಕಿ ಉಳಿದಿರುವ ವಿದ್ಯುದ್ದೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದೆ.

ಹುಬ್ಬಳ್ಳಿ-ಹಾವೇರಿ ನಡುವಿನ ಕೆಲವು ಭಾಗಗಳನ್ನು ಹೊರತುಪಡಿಸಿ ಹುಬ್ಬಳ್ಳಿ-ಬೆಂಗಳೂರು ನಡುವಿನ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಕಾಮಗಾರಿಗಳು 2-3 ವಾರಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಕೋರ್(CORE) ಬಿಡುಗಡೆ ಮಾಡಿದ ದಾಖಲೆಯ ಪ್ರಕಾರ, ಭಾರತೀಯ ರೈಲ್ವೆ ಆದಷ್ಟು ಬೇಗ ಬೆಂಗಳೂರು ಮತ್ತು ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಓಡಾಟವನ್ನು ನಡೆಸಲಿದೆ.

ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ರೈಲುಗಳು ಜೂನ್ 2 ಅಥವಾ 3 ನೇ ವಾರದೊಳಗೆ ಎಲೆಕ್ಟ್ರಿಕ್ ಲೊಕೊಸ್ ಮೂಲಕ ಚಲಿಸುವ ಸಾಧ್ಯತೆಯಿದೆ. ಟ್ರಾಕ್ಷನ್ ಸಬ್‌ಸ್ಟೇಷನ್ (TSS) ನಿರ್ಮಾಣವು ಕೆಲವು ಸ್ಥಳಗಳಲ್ಲಿ ಪ್ರಗತಿಯಲ್ಲಿದೆ.

ಮಾರ್ಚ್ 31 ರಂದು ದೇವರಗುಡ್ಡ ಹುಬ್ಬಳ್ಳಿ ವಿಭಾಗ (ಅಪ್ ಲೈನ್ ಮಾತ್ರ) ನಡುವೆ ಎಲೆಕ್ಟ್ರಿಕ್ ಲೋಕೋ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಯಿತು. ಡೌನ್ ಲೈನ್ ವಿದ್ಯುದೀಕರಣವು ಇನ್ನೂ ಕಾರ್ಯಾರಂಭ ಮಾಡಿಲ್ಲ.

ರೈಲು-18 ಎಂದೂ ಕರೆಯಲ್ಪಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತೀಯ ರೈಲ್ವೇಯಿಂದ ನಿರ್ವಹಿಸಲ್ಪಡುವ ಸೆಮಿ-ಹೈ-ಸ್ಪೀಡ್, ಇಂಟರ್‌ಸಿಟಿ, ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲು ಆಗಿದೆ. ರೈಲನ್ನು ಗಂಟೆಗೆ 180 ಕಿಮೀ ವೇಗದಲ್ಲಿ ಕಾರ್ಯನಿರ್ವಹಿಸಲು ಪರೀಕ್ಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT