ಠಾಣೆಯಲ್ಲಿ ಕುಳಿತಿರುವ ಮಹಿಳೆ. 
ರಾಜ್ಯ

ಚಿಕ್ಕಮಗಳೂರು: ಯುವಕರಿಂದ ಅಸಭ್ಯ ವರ್ತನೆ, ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ!

ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಪಕ್ಕದ ಮನೆಯ ಯುವಕರು ತನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಗಂಡನಿಗೆ ಜೀವ ಬೆದರಿಕೆ ಹಾಕಿದ್ದಾರೆಂದು 2 ದಿನಗಳ ಹಿಂದೆ ಮಹಿಳೆ ಕುದುರೆಮುಖ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಯುವಕರ ದುರ್ವತನೆ ಕುರಿತ ವಿಡಿಯೋವನ್ನು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಕಚೇರಿಗೇ ತೆರಳಿ 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿವರಗೂ ಠಾಣೆಯಲ್ಲಿ ಕುಳಿತಿದ್ದಾರೆ. ಎಫ್ಐಆರ್ ದಾಖಲಾಗದ ಹೊರತು ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಮಹಿಳೆ ಪ್ರತಿಭಟನೆ ಕುರಿತ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿ ವೇಳೆ ಯುವಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ದೂರು ಹಿನ್ನೆಲೆಯಲ್ಲಿ ಅಸಭ್ಯ ವರ್ತನೆ ತೋರಿದ ನವೀನ್ ಹಾಗೂ ಶ್ರೇಯಾಂಕ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

T20 ವಿಶ್ವಕಪ್ 2026: 'ಯಾವುದೂ ಕಷ್ಟವಲ್ಲ..' Usman Tariq ವಿವಾದಾತ್ಮಕ ಬೌಲಿಂಗ್ ಶೈಲಿ ಎದುರಿಸಲು ಸೂಪರ್ ಐಡಿಯಾ ಕೊಟ್ಟ Sourav Ganguly!

Chittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! video

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್​​ಗೆ ಕಾರು ಡಿಕ್ಕಿ; ಐವರು ಯುವಕರು ಸಾವು

SCROLL FOR NEXT