ಠಾಣೆಯಲ್ಲಿ ಕುಳಿತಿರುವ ಮಹಿಳೆ. 
ರಾಜ್ಯ

ಚಿಕ್ಕಮಗಳೂರು: ಯುವಕರಿಂದ ಅಸಭ್ಯ ವರ್ತನೆ, ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ!

ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಪಕ್ಕದ ಮನೆಯ ಯುವಕರು ತನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಗಂಡನಿಗೆ ಜೀವ ಬೆದರಿಕೆ ಹಾಕಿದ್ದಾರೆಂದು 2 ದಿನಗಳ ಹಿಂದೆ ಮಹಿಳೆ ಕುದುರೆಮುಖ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಯುವಕರ ದುರ್ವತನೆ ಕುರಿತ ವಿಡಿಯೋವನ್ನು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಕಚೇರಿಗೇ ತೆರಳಿ 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿವರಗೂ ಠಾಣೆಯಲ್ಲಿ ಕುಳಿತಿದ್ದಾರೆ. ಎಫ್ಐಆರ್ ದಾಖಲಾಗದ ಹೊರತು ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಮಹಿಳೆ ಪ್ರತಿಭಟನೆ ಕುರಿತ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿ ವೇಳೆ ಯುವಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ದೂರು ಹಿನ್ನೆಲೆಯಲ್ಲಿ ಅಸಭ್ಯ ವರ್ತನೆ ತೋರಿದ ನವೀನ್ ಹಾಗೂ ಶ್ರೇಯಾಂಕ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾಟಿ ಚಿಕನ್-ಇಡ್ಲಿ': ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯವೇನು?

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ-Video

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

SCROLL FOR NEXT