ಮುಖ್ಯಮಂತ್ರಿಗಳೊಂದಿಗೆ ಸರ್ಕಾರದ ಅಧಿಕಾರಿಗಳ ಸಭೆ 
ರಾಜ್ಯ

ಕಾಂಗ್ರೆಸ್ ನ ಮೂರು ಗ್ಯಾರಂಟಿಗಳಿಗೆ ಅನುಮೋದನೆ?: ಸರ್ಕಾರಕ್ಕೆ ನೀಲನಕ್ಷೆ ಸಲ್ಲಿಸಿದ ಹಣಕಾಸು ಇಲಾಖೆ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿ ಯೋಜನೆಗಳಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಸರ್ಕಾರದ 5 ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ವರದಿ ಸಲ್ಲಿಸಿದರು.

ಹಣಕಾಸು ಇಲಾಖೆ ಅಧಿಕಾರಿಗಳು(FDOs) ಪ್ರತಿ ಯೋಜನೆಯ ನೀಲನಕ್ಷೆಯನ್ನು ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಸಲ್ಲಿಸಿದ್ದಾರೆ. ಪ್ರತಿ ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಷ್ಟು ಖರ್ಚಾಗುತ್ತದೆ, ಯಾವಾಗ ಹೇಗೆ ಜಾರಿ ಮಾಡಬಹುದು ಎಂದು ನೀಲನಕ್ಷೆಯಲ್ಲಿ ವಿವರಿಸಲಾಗಿದೆ. 

ಸರ್ಕಾರಕ್ಕೆ ಎಷ್ಟು ಹೊರೆ?: ಹಣಕಾಸು ಇಲಾಖೆ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಎರಡು ಪ್ರಸ್ತಾವನೆಗಳ ಪ್ರಕಾರ ಗ್ಯಾರಂಟಿ ಭಾಗ್ಯಗಳನ್ನು ಯಾವುದೇ ಷರತ್ತುಗಳಿಲ್ಲದೆ ವಿಧಿಸಿದರೆ ಸರ್ಕಾರದ ಬೊಕ್ಕಸಕ್ಕೆ 1 ಲಕ್ಷ ಕೋಟಿ ರೂಪಾಯಿ ಹೊರೆಯಾಗುತ್ತದೆ. ಷರತ್ತುಗಳನ್ನು ವಿಧಿಸಿ ಗ್ಯಾರಂಟಿಗಳನ್ನು ಜಾರಿಗೆ ತಂದರೆ ಸರ್ಕಾರಕ್ಕೆ 50 ಸಾವಿರ ಕೋಟಿ ರೂಪಾಯಿ ಹೊರೆ ಬೀಳಲಿದೆ.

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಇನ್ನು ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT