ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ

ಸೋಮೇಶ್ವರ ಬೀಚ್‌ನಲ್ಲಿ ನಡೆದ 'ನೈತಿಕ ಪೊಲೀಸ್‌ಗಿರಿ'ಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರು ಹಿಂದುತ್ವವಾದಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ನಗರದ ಹೊರವಲಯದ ಸೋಮೇಶ್ವರ ಬೀಚ್‌ನಲ್ಲಿ ನಡೆದ 'ನೈತಿಕ ಪೊಲೀಸ್‌ಗಿರಿ'ಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರು ಹಿಂದುತ್ವವಾದಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಸ್ತಿಪಡ್ಪುವಿನ ಯತೀಶ್, ತಲಪಾಡಿಯ ಸಚಿನ್, ಸುಹಾನ್ ಮತ್ತು ಅಖಿಲ್ ಬಂಧಿತರು. ಇತರ ಶಂಕಿತರನ್ನು ಬಂಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ ಮತ್ತು ಬಂಧಿತ ವ್ಯಕ್ತಿಗಳ ವಿರುದ್ಧ ಗಲಭೆ ಮತ್ತು ಕೊಲೆ ಯತ್ನದ ಪ್ರಕರಣಗಳನ್ನು ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಉಳ್ಳಾಲ ಠಾಣೆಗೆ ಭೇಟಿ ನೀಡಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ , ಇನ್ನೂ ಕೆಲವು ಶಂಕಿತರನ್ನು ಬಂಧಿಸಬೇಕಿದ್ದು, ಮೂರು ತಂಡಗಳು ಕಾರ್ಯನಿರ್ವಹಿಸುತ್ತಿವೆ.

ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗುವುದು. ಪರಿಣಾಮಕಾರಿ ಪೊಲೀಸ್ ಗಸ್ತು ವಿಗೆ ಕ್ರಮ ವಹಿಸಲಾಗುವುದು, ಬೀಚ್‌ಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗುವುದು, ಬೀಚ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ರೌಂಡ್ಸ್ ಗೆ ತೆರಳಲಿದ್ದಾರೆ ಎಂದು ತಿಳಿಸಿದರು. 

ಮಂಗಳೂರಿನ ಖಾಸಗಿ ಕಾಲೇಜೊಂದರ  ಮೂವರು ಮುಸ್ಲಿಂ ಯುವಕರಾದ ಆಶಿಕ್, ಮುಜೀಬ್ ಮತ್ತು ಜಾಫರ್ ಷರೀಫ್ ಗುರುವಾರ ವಿವಿಧ ಧರ್ಮಗಳಿಗೆ ಸೇರಿದ ಮೂವರು ಮಹಿಳಾ ಸ್ನೇಹಿತರ ಜೊತೆ ಗುರುವಾರ ಸೋಮೇಶ್ವರ ಬೀಚ್ ನಲ್ಲಿ ಸುತ್ತಾಡುತ್ತಿದ್ದರು. ರಾತ್ರಿ 7.20 ರ ಸುಮಾರಿಗೆ ಅಲ್ಲಿಗೆ ಬಂದ 10 ರಿಂದ 15 ಜನರ ಗುಂಪು ಅವರ ಹೆಸರು ಮತ್ತು ಗುರುತಿನ ಚೀಟಿ ಕೇಳಿದ್ದಾರೆ.

ನಂತರ ಆರೋಪಿಗಳು ವಿವಿಧ ಧರ್ಮದ ಮಹಿಳೆಯರೊಂದಿಗೆ ಒಡನಾಟ ಹೊಂದಿದ್ದಕ್ಕಾಗಿ ಮೂವರು ಯುವಕರನ್ನು ನಿಂದಿಸಿ ದೊಣ್ಣೆ, ಬೆಲ್ಟ್, ಕಲ್ಲುಗಳಿಂದ  ಥಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಗಸ್ತು ತಂಡವು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದೆ. ಎಲ್ಲಾ 6 ಮಂದಿ ಕೇರಳದವರು ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT