ಡಾ ವಸುಂಧರಾ ಭೂಪತಿ 
ರಾಜ್ಯ

ಡಾ ವಸುಂಧರಾ ಭೂಪತಿ ಸೇರಿ ಹಲವು ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್ಐಆರ್ ದಾಖಲಿಸಿದ ವೈದ್ಯೆ

ಬರಹಗಾರ್ತಿ ಹಾಗೂ ಆಯುರ್ವೇದ ವೈದ್ಯೆ ಡಾ ವಸುಂಧರಾ ಭೂಪತಿ ಸೇರಿದಂತೆ ಹಲವು ಸಾಹಿತಿಗಳು, ಹೋರಾಟಗಾರರಿಗೆ ಜೀವ ಬೆದರಿಕೆ ಬಂದಿದ್ದು ಈ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಬೆಂಗಳೂರು: ಬರಹಗಾರ್ತಿ ಹಾಗೂ ಆಯುರ್ವೇದ ವೈದ್ಯೆ ಡಾ ವಸುಂಧರಾ ಭೂಪತಿ ಸೇರಿದಂತೆ ಹಲವು ಸಾಹಿತಿಗಳು, ಹೋರಾಟಗಾರರಿಗೆ ಜೀವ ಬೆದರಿಕೆ ಬಂದಿದ್ದು ಈ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಡಾ ವಸುಂಧರಾ ಭೂಪತಿ ಅವರಿಗೆ ಮೇ 29ರಂದು ಬೆದರಿಕೆ ಪತ್ರ ಬಂದಿದ್ದು ಅದರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಅಂಚೆ ಕಚೇರಿ ಮುದ್ರೆ ಹಾಕಲಾಗಿದೆ. ರಾಜ್ಯದ ಪ್ರಗತಿಪರ ಮತ್ತು ಜಾತ್ಯತೀತ ಬುದ್ಧಿಜೀವಿಗಳೊಂದಿಗೆ ಗುರುತಿಸಿಕೊಳ್ಳಬೇಡಿ ಎಂದು ಹೆಸರಿಸದ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಕ್ರಮವನ್ನು ಮುಂದುವರಿಸಿದರೆ ನಿಮ್ಮ ಜೀವಕ್ಕೆ ಬೆಲೆ ತೆರುತ್ತೀರಿ ಎಂದು ಸಹ ಪತ್ರದಲ್ಲಿ ಭೂಪತಿ ಅವರಿಗೆ ಬೆದರಿಕೆ ಹಾಕಲಾಗಿದೆ.

ನಾನು ವೃತ್ತಿಯಲ್ಲಿ ವೈದ್ಯೆಯಾಗಿದ್ದು ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದೇನೆ. ಮಹಿಳಾ ಪರ ಹಾಗೂ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ನನಗೆ ಬೆದರಿಕೆ ಪತ್ರಗಳು ಬಂದಿದ್ದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಿ ಎಂದು ವಸುಂಧರಾ ಭೂಪತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಸಂಸ್ಕೃತಿ ಚಿಂತಕ ಡಾ ಬಂಜಗೆರೆ ಜಯಪ್ರಕಾಶ್ ಅವರಿಗೂ ಬೆದರಿಕೆ ಪತ್ರ ಬಂದಿದ್ದು ಅವರು ಸಹ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT