ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವೃದ್ಧೆ ಹತ್ಯೆ ಪ್ರಕರಣ, ಮೂವರ ಬಂಧನ

ಇತ್ತೀಚೆಗೆ ಒಂಟಿ ವೃದ್ಧೆಯ ಕೈ-ಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಪ್ಲಂಬರ್ ಸೇರಿ ಮೂವರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಒಂಟಿ ವೃದ್ಧೆಯ ಕೈ-ಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಪ್ಲಂಬರ್ ಸೇರಿ ಮೂವರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಲಗ್ಗೆರೆಯಲ್ಲಿ ವಾಸವಾಗಿರುವ ಪ್ಲಂಬರ್ ಆರ್ ಅಶೋಕ್ (40), ಕೆಂಪೇಗೌಡ ಲೇಔಟ್‌ನ ಎಂ ಸಿದ್ದರಾಜು (34) ಮತ್ತು ಕಾಮಾಕ್ಷಿಪಾಳ್ಯದ ಸಿ ಅಂಜನಾ ಮೂರ್ತಿ (33) ಎಂದು ಗುರುತಿಸಲಾಗಿದೆ.

ಕೊಲೆಯ ನಂತರ ಮೂವರು ಮೈಸೂರಿಗೆ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆರೋಪಿಗಳ ಪತ್ತೆಗೆ ಮೈಸೂರಿಗೆ ತೆರಳಿದ್ದ ಪೊಲೀಸರು ಅಲ್ಲಿಂದಲೇ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಸಾಲ ಮಾಡಿಕೊಂಡಿದ್ದ ಆರೋಪಿಗಳು, ಅದನ್ನು ತೀರಿಸಲು ಸಾಧ್ಯವಾಗಿಲ್ಲ. ಹೀಗಾಗಿ ದರೋಡೆ ಮಾಡಲು ನಿರ್ಧರಿಸಿದ್ದರು ಎಂದು ತಿಳಿದುಬಂದಿದೆ.

ಪ್ಲಂಬರ್ ಆಗಿದ್ದ ಆರೋಪಿ ಅಶೋಕ್ ಮೂರು ತಿಂಗಳುಗಳ ಹಿಂದೆ ಹತ್ಯೆಯಾದ ಕಮಲಾ ಅವರ ಮನೆಗೆ ದುರಸ್ತಿ ಕಾರ್ಯಕ್ಕಾಗಿ ಮನೆಗೆ ಭೇಟಿ ನೀಡಿದ್ದ. ಈ ವೇಳೆ ಮನೆಯಲ್ಲಿ ವೃದ್ಧೆಯೊಬ್ಬಳೇ ಇರುವುದನ್ನು ಪತ್ತೆ ಮಾಡಿದ್ದ. ಇದರಂತೆ ಹಣಕ್ಕಾಗಿ ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಸಂಚು ರೂಪಿಸಿದ್ದ.

ಹತ್ಯೆಯಾದ ಕಮಲಾ ಅವರ ಮನೆಯ ಕಟ್ಟಡದ ಒಂದ ಭಾಗ ಖಾಲಿಯಿದ್ದು, ಮೇ.27ರಂದು ಕಮಲಾ ಅವರ ಮನೆ ಬಳಿ ಬಾಡಿಗೆದಾರರ ಸೋಗಿನಲ್ಲಿ ತೆರಳಿದ್ದ ಆರೋಪಿಗಳಾದ ಸಿದ್ದರಾಜು ಮತ್ತು ಮೂರ್ತಿ ಗೋಡೌನ್ ಗಾಗಿ ಬಾಡಿಗೆಗೆ ಜಾಗ ನೀಡುವಂತೆ ಕೇಳಿದ್ದರು, ಈ ವೇಳೆ ಕಮಲಾ ಅವರು ನಿರಾಕರಿಸಿದ್ದಾರೆ. ಸಂಜೆ ಮತ್ತೆ ಪ್ಲಂಬರ್ ಅಶೋಕ್ ಮನೆ ಬಳಿ ಹೋಗಿದ್ದಾನೆ. ಗೊತ್ತಿದ್ದ ವ್ಯಕ್ತಿಯಾಗಿದ್ದರಿಂದ ಕಮಲಾ ಅವರು ಬಾಗಿಲು ತೆರೆದಿದ್ದಾರೆ. ಈ ವೇಳೆ ಮತ್ತಿಬ್ಬರು ಆರೋಪಿಗಳು ಒಳಗೆ ನುಗ್ಗಿದ್ದಾರೆ. ಬಳಿಕ ವೃದ್ಧೆಯ ಕೈಕಾಲುಗಳನ್ನು ಬಟ್ಟೆಯಿಂದ ಕಟ್ಟಿ ಬಾಯಿಗೂ ಬಟ್ಟೆ ತುರಿಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.ಬಳಿಕ ಮೈ ಮೇಲಿದ್ದ 40 ಗ್ರಾಮ ತೂಕದ ಎರಡು ಚಿನ್ನದ ಸರಗಳು ಹಾಗೂ 2 ಚಿನ್ನದ ಬಳೆಗಳನ್ನು ದೋಚಿ ಪರಾರಿಯಾಗಿದ್ದಾರೆ.

ಈ ಸಂಬಂಧ ಮೃತಳ ಪುತ್ರ ಗುರುಪ್ರಸಾದ್ ನೀಡಿದ ದೂರಿನ ಮೇಲೆಗೆ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಇದರಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಕಮಲಾ ಅವರು ಪತಿ ನಾಗರಾಜ್ ಅವರನ್ನು ಕಳೆದುಕೊಂಡಿದ್ದರು. ನಂತರ ಕಮಲಾ ಅವರು ಒಂಟಿಯಾಗಿ ನೆಲೆಸಿದ್ದರು. ಮದುವೆಯಾದ ಇವರ ಮೂವರು ಮಕ್ಕಳು ನಗರದ ವಿವಿಧೆಡೆ ನೆಲೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT