ಸಾಂದರ್ಭಿಕ ಚಿತ್ರ 
ರಾಜ್ಯ

200 ಯುನಿಟ್ ಉಚಿತ ಘೋಷಣೆ ಬೆನ್ನಲ್ಲೆ ಜನತೆಗೆ ರಾಜ್ಯ ಸರ್ಕಾರ ಶಾಕ್: ಜುಲೈ 1 ರಿಂದ ವಿದ್ಯುತ್ ದರ ಏರಿಕೆ

ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಹಾಕಿದೆ.

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.

ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್‌ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಈ ಏರಿಕೆ ಇಂಧನ ಹೊಂದಾಣಿಕೆ ಶುಲ್ಕವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಮ್‌ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ, ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್‌ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್‌ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!