ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ 
ರಾಜ್ಯ

ಒಡಿಶಾದಲ್ಲಿ ಸಿಲುಕಿರುವ ವಾಲಿಬಾಲ್ ಆಟಗಾರರನ್ನು ಕರೆತರಲು ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ ಕರ್ನಾಟಕ ಸರ್ಕಾರ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ ಅಲ್ಲಿ ಸಿಲುಕಿರುವ 32 ವಾಲಿಬಾಲ್ ಆಟಗಾರರು ಮತ್ತು ಅವರ ಕೋಚ್‌ಗಾಗಿ ತಂಡವು ಕೋಲ್ಕತ್ತಾ-ಬೆಂಗಳೂರು ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದೆ ಎಂದು ಸುದ್ದಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ ಒಡಿಶಾದಲ್ಲಿ ಸಿಲುಕಿರುವ ರಾಜ್ಯದ ಕನ್ನಡಿಗರನ್ನು ಮರಳಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಶನಿವಾರ ಐದು ಸದಸ್ಯರ ತಂಡವನ್ನು ಕಳುಹಿಸಿದೆ.

ಅಲ್ಲಿ ಸಿಲುಕಿರುವ 32 ವಾಲಿಬಾಲ್ ಆಟಗಾರರು ಮತ್ತು ಅವರ ಕೋಚ್‌ಗಾಗಿ ತಂಡವು ಕೋಲ್ಕತ್ತಾ-ಬೆಂಗಳೂರು ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದೆ ಎಂದು ಸುದ್ದಿ ಪ್ರಕಟಣೆ ತಿಳಿಸಿದೆ.

ಕೋಲ್ಕತ್ತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪುರುಷ ಮತ್ತು ಮಹಿಳಾ ಆಟಗಾರರು ಭಾಗವಹಿಸಿದ್ದರು. ಅವರು ರೈಲಿನಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಒಡಿಶಾದಲ್ಲಿ ಅಪಘಾತ ಸಂಭವಿಸಿದ್ದು, ಅವರು ಸಿಲುಕಿಕೊಂಡರು.

ಕರ್ನಾಟಕ ಸರ್ಕಾರ ಇದೀಗ ಅವರನ್ನು ಬೆಂಗಳೂರಿಗೆ ವಾಪಸ್ ಕಳುಹಿಸಲು ವ್ಯವಸ್ಥೆ ಮಾಡಿದೆ. ಅದರಂತೆ ಭಾನುವಾರ ಬೆಳಗ್ಗೆ 4.15ಕ್ಕೆ ಕೋಲ್ಕತ್ತಾದಿಂದ ಇಂಡಿಗೋ ವಿಮಾನದಲ್ಲಿ ಸಂಜೆ 6.50ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT