ಮಹಿಳೆ ಬಲಿ ಪಡೆದ ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ

ನಗರದಲ್ಲಿ  ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್  ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ.

ಬೆಂಗಳೂರು: ನಗರದಲ್ಲಿ  ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ. ಲತಾ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಹೆಬ್ಬಾಳ ಕೆಂಪಾಪುರದ ಲತಾ, ಪತಿ ಅನಂತರಾಮಕೃಷ್ಣರ ಜೊತೆಗೆ ಬೈಕ್ ನಲ್ಲಿ ಹೊರಟಿದ್ದಾಗ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪ್ಪಾರ ಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶೇಷಾದ್ರಿ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಮೆಜೆಸ್ಟಿಕ್ ನಿಂದ ಕೆ.ಆರ್.ವೃತ್ತದತ್ತ ಹೊರಟಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ಲತಾ ಅವರ ತಲೆ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿದೆ. ಇದರಿಂದಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಂತರಾಮಕೃಷ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೊಟಕ್ಕೆ ತಿಳಿದುಬಂದಿದೆ. ಬಸ್ ಜಪ್ತಿ ಮಾಡಿರುವ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT