ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ 
ರಾಜ್ಯ

ಚಾಮರಾಜನಗರ: ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ, ಲೇಖಕ ಭಗವಾನ್ ಕೂದಲೆಳೆ ಅಂತರದಲ್ಲಿ ಪಾರು

ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರ: ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ವಿಚಾರವಾದಿ ಕೆ.ಎಸ್.ಭಗವಾನ್ ಹಾಗೂ ಇತರರು  ಸಫಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಆನೆಯೊಂದು ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಸಫಾರಿ ವಾಹನ ಚಾಲಕನ ಮುಂಜಾಗ್ರತೆಯಿಂದ ವಾಹನದಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಫಾರಿ ವಾಹನ ಸಾಗುತ್ತಿದ್ದ ಹಾದಿಗೆ ಆನೆಯೊಂದು ಅಡ್ಡಬಂದಿದೆ. ಭಗವಾನ್ ಇದ್ದ ವಾಹನವನ್ನು ನೋಡಿ ಸಿಟ್ಟಿಗೆದ್ದ ಅದು ಕೂಡಲೇ ಓಡಿಸಿಕೊಂಡು ಬಂದಿದೆ. ಕೂಡಲೇ ವಾಹನ ಚಾಲಕನು ವಾಹನಕ್ಕೆ ರಿವರ್ಸ್ ಗೇರ್ ಹಾಕಿ, ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿಕೊಂಡು ಸ್ವಲ್ಪ ದೂರ ಬಂದಿದ್ದಾರೆ. ವಾಹನವು ಹಿಮ್ಮುಖಕ್ಕೆ ಚಲಿಸಿದ ಕೂಡಲೇ ಸ್ವಲ್ಪ ದೂರದವರೆಗೆ ಓಡಿಸಿಕೊಂಡು ಬಂದ ಆನೆಯು ಆನಂತರ ತನ್ನ ಪಾಡಿಗೆ ತಾನು ಶಾಂತಗೊಂಡು ಮುಂದಕ್ಕೆ ನಡೆದಿದೆ. ವಾಹನದತ್ತ ಧಾವಿಸಿಬಂದಿದ್ದು ಹೆಣ್ಣಾನೆ ಎಂದು ವಾಹನ ಚಾಲಕರು ತಿಳಿಸಿದ್ದಾರೆ. 

ನಾವು ಹೋಗುವಾಗ ಆನೆಯ ಹಿಂಡು ಅಡ್ಡ ಬಂದಿತು. ಹಿಂಡಿನಲ್ಲಿ ಒಟ್ಟು 6 ಆನೆಗಳಿದ್ದವು. ಹಿಂಡಿನಲ್ಲಿ ಒಂದು ಪುಟಾಣಿ ಆನೆ ಮರಿಯೂ ಇತ್ತು. ಆ ಮರಿಯಿದ್ದರಿಂದ ನಮ್ಮ ವಾಹನವನ್ನು ನೋಡಿದ ಕೂಡಲೇ ಹೆಣ್ಣಾನೆಗೆ ಸಿಟ್ಟುಬಂದು ನಮ್ಮನ್ನು ಹೆದರಿಸಿತು. ಕಾಡು ಪ್ರಾಣಿಗಳದ್ದು ಸಹಜ ವರ್ತನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT