ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ 
ರಾಜ್ಯ

ಚಾಮರಾಜನಗರ: ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ, ಲೇಖಕ ಭಗವಾನ್ ಕೂದಲೆಳೆ ಅಂತರದಲ್ಲಿ ಪಾರು

ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರ: ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ವಿಚಾರವಾದಿ ಕೆ.ಎಸ್.ಭಗವಾನ್ ಹಾಗೂ ಇತರರು  ಸಫಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಆನೆಯೊಂದು ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಸಫಾರಿ ವಾಹನ ಚಾಲಕನ ಮುಂಜಾಗ್ರತೆಯಿಂದ ವಾಹನದಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಫಾರಿ ವಾಹನ ಸಾಗುತ್ತಿದ್ದ ಹಾದಿಗೆ ಆನೆಯೊಂದು ಅಡ್ಡಬಂದಿದೆ. ಭಗವಾನ್ ಇದ್ದ ವಾಹನವನ್ನು ನೋಡಿ ಸಿಟ್ಟಿಗೆದ್ದ ಅದು ಕೂಡಲೇ ಓಡಿಸಿಕೊಂಡು ಬಂದಿದೆ. ಕೂಡಲೇ ವಾಹನ ಚಾಲಕನು ವಾಹನಕ್ಕೆ ರಿವರ್ಸ್ ಗೇರ್ ಹಾಕಿ, ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿಕೊಂಡು ಸ್ವಲ್ಪ ದೂರ ಬಂದಿದ್ದಾರೆ. ವಾಹನವು ಹಿಮ್ಮುಖಕ್ಕೆ ಚಲಿಸಿದ ಕೂಡಲೇ ಸ್ವಲ್ಪ ದೂರದವರೆಗೆ ಓಡಿಸಿಕೊಂಡು ಬಂದ ಆನೆಯು ಆನಂತರ ತನ್ನ ಪಾಡಿಗೆ ತಾನು ಶಾಂತಗೊಂಡು ಮುಂದಕ್ಕೆ ನಡೆದಿದೆ. ವಾಹನದತ್ತ ಧಾವಿಸಿಬಂದಿದ್ದು ಹೆಣ್ಣಾನೆ ಎಂದು ವಾಹನ ಚಾಲಕರು ತಿಳಿಸಿದ್ದಾರೆ. 

ನಾವು ಹೋಗುವಾಗ ಆನೆಯ ಹಿಂಡು ಅಡ್ಡ ಬಂದಿತು. ಹಿಂಡಿನಲ್ಲಿ ಒಟ್ಟು 6 ಆನೆಗಳಿದ್ದವು. ಹಿಂಡಿನಲ್ಲಿ ಒಂದು ಪುಟಾಣಿ ಆನೆ ಮರಿಯೂ ಇತ್ತು. ಆ ಮರಿಯಿದ್ದರಿಂದ ನಮ್ಮ ವಾಹನವನ್ನು ನೋಡಿದ ಕೂಡಲೇ ಹೆಣ್ಣಾನೆಗೆ ಸಿಟ್ಟುಬಂದು ನಮ್ಮನ್ನು ಹೆದರಿಸಿತು. ಕಾಡು ಪ್ರಾಣಿಗಳದ್ದು ಸಹಜ ವರ್ತನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ