ಒಡಿಶಾದಲ್ಲಿ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ 
ರಾಜ್ಯ

ಒಡಿಶಾ ರೈಲು ಅಪಘಾತ: ಕರ್ನಾಟಕದ ಕಳಸ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತ

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12864) ನಲ್ಲಿ ಪ್ರಯಾಣಿಸುತ್ತಿದ್ದ ಕಳಸಾ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. 

ಬೆಂಗಳೂರು: ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12864) ನಲ್ಲಿ ಪ್ರಯಾಣಿಸುತ್ತಿದ್ದ ಕಳಸಾ ತಾಲೂಕಿನ ಎಲ್ಲಾ 110 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. 

ಕಳಸ, ಹೊರನಾಡು ಮತ್ತು ಸಂಸೆಯಿಂದ ಒಟ್ಟು 110 ಜನರು ಜೈನರ ಪವಿತ್ರ ಯಾತ್ರಾಸ್ಥಳಗಳಲ್ಲಿ ಒಂದಾದ ಶಿಖರ್ಜಿಗೆ ಪ್ರಯಾಣ ಬೆಳೆಸಿದ್ದರು. ಇವರೆಲ್ಲರೂ ಜೂನ್ 1 ರಂದು ಬೆಂಗಳೂರಿನಿಂದ ಹೊರಟಿದ್ದರು.

ಒಡಿಶಾದಲ್ಲಿ ನೂರಾರು ಜನರ ಸಾವಿಗೆ ಕಾರಣವಾದ ಮೂರು ರೈಲು ದುರಂತದ ಸುದ್ದಿಯ ನಂತರ ಕಳಸಾದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಒಡಿಶಾದ ಬಾಲಸೋರ್‌ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿದೆ.

ರೈಲು ಅಪಘಾತದ ಬಳಿಕ ಮಹಿಮ ಸಾಗರ ಮುನಿ ಬೆಂಬಲದೊಂದಿಗೆ ತೀರ್ಥಯಾತ್ರೆಗೆ ತೆರಳಿದ್ದ ಪ್ರಯಾಣಿಕರನ್ನು ಸಂಪರ್ಕಿಸಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಎಲ್ಲಾ 110 ಪ್ರಯಾಣಿಕರು ಒಟ್ಟಿಗೆ ಪ್ರಯಾಣಿಸುತ್ತಿದ್ದರು ಮತ್ತು ಅವರನ್ನು ಸಂಪರ್ಕಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಬಿ ಆರ್ ಹೇಳಿದ್ದಾರೆ.

ತಂಡದ ಭಾಗವಾಗಿದ್ದ ಶೇಷರಾಜ್ ಜೈನ್ ಮಾತನಾಡಿ, ನಾವು ರೈಲಿನ ಕೊನೆಯ ನಾಲ್ಕು ಬೋಗಿಗಳಲ್ಲಿ ವಿಶಾಖಪಟ್ಟಣದವರೆಗೆ ಪ್ರಯಾಣಿಸುತ್ತಿದ್ದೆವು. ರೈಲಿನ ಇಂಜಿನ್ ಬದಲಾವಣೆಯಿಂದ ಹಿಂದೆ ಇದ್ದ ಬೋಗಿಗಳು ಮುಂದೆ ಬಂದವು. ಪರಿಣಾಮವಾಗಿ, ನಾವು ಸುರಕ್ಷಿತವಾಗಿದ್ದೇವೆ ಎಂದು ಹೇಳಿದರು. 

ಶನಿವಾರ ಬಸ್‌ನಲ್ಲಿ ಎಲ್ಲರೂ ಕೋಲ್ಕತ್ತಾ ತಲುಪಿದ್ದು, ಭಾನುವಾರ ಶಿಖರ್ಜಿ ತಲುಪುವುದಾಗಿ ತಿಳಿಸಿದರು.

ಸರ್ವೋದಯ ತೀರ್ಥ ಸಮಿತಿ ಅಧ್ಯಕ್ಷ ಬ್ರಹ್ಮದೇವ್ ಮಾತನಾಡಿ, ಎಲ್ಲಾ ಯಾತ್ರಾರ್ಥಿಗಳ ಸುರಕ್ಷತೆಯು ಅವರ ಒಳ್ಳೆಯ ಕಾರ್ಯಗಳ ಫಲಿತಾಂಶವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT