ಆಕಸ್ಮಿಕವಾಗಿ ಕೆರೆಯೊಳಗೆ ಬಿದ್ದಿದ್ದ ಕಾಡಾನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ 
ರಾಜ್ಯ

ಕೊಡಗು: ನೀರು ಕುಡಿಯಲು ಬಂದು ಕೆರೆಗೆ ಬಿದ್ದಿದ್ದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ವಿರಾಜಪೇಟೆ: ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ಕರಡ ಗ್ರಾಮದ ನಡಿಕೇರಿಯಂಡ ಐಯಣ್ಣ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕಾಫಿ ಗಿಡಗಳಿಗೆ ನೀರುಣಿಸಲು ಕೆರೆ ತೋಡಲಾಗಿತ್ತು. ಈ ವೇಳೆ ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು, ಅದರಲ್ಲಿ ಒಂದು ಕಾಡಾನೆ ಕೆರೆಗೆ ಬಿದ್ದಿತ್ತು.

25 ವರ್ಷದ ಆನೆ ಬಾಯಾರಿಕೆ ನೀಗಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಎಸ್ಟೇಟ್‌ನಲ್ಲಿದ್ದ ಕೆರೆಗೆ ಬಿದ್ದಿದೆ. ಆದರೆ, ಅಲ್ಲಿಂದ ಹೊರ ಬರಲು ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಎಸ್ಟೇಟ್‌ನ ಕಾರ್ಮಿಕರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ದೌಡಾಯಿಸಿ ಅರಣ್ಯಾಧಿಕಾರಿಗಳು, ಆನೆ ಹೊರ ಬರಲು ಮಣ್ಣು ತೆಗೆಯುವ ಯಂತ್ರವನ್ನು ಬಳಸಿ ಕೆರೆಯಿಂದ ಮಾರ್ಗ ನಿರ್ಮಿಸಿದ್ದಾರೆ. ಈ ವೇಳೆ ಕೆರೆಯಿಂದ ಹೊರಬಂದ ಆನೆ, ಪಕ್ಕದಲ್ಲಿಯೇ ನಿಲ್ಲಿಸಿದ್ದ ಅರಣ್ಯಾಧಿಕಾರಿಗಳ ಜೀಪಿನತ್ತ ನುಗ್ಗಿತು. 

ಅರಣ್ಯ ಇಲಾಖೆಯ ಸುಮಾರು 30 ಸಿಬ್ಬಂದಿ ಕಾಡಾನೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಡಿಸಿಎಫ್ ಶರಣ ಬಸಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT