ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ 
ರಾಜ್ಯ

'ಗೃಹ ಲಕ್ಷ್ಮಿ' ಯೋಜನೆ ಉಳ್ಳವರಿಗಿಂತ ಸಮಾಜದ ದುರ್ಬಲ ವರ್ಗದವರನ್ನು ಹೆಚ್ಚು ತಲುಪುವುದು ಸೂಕ್ತ: ತಜ್ಞರ ಅಭಿಮತ

ಉತ್ತಮ ಆರ್ಥಿಕ ಹಿನ್ನೆಲೆ ಹೊಂದಿರುವ ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹೆಚ್ಚಿನ ಲಾಭ ಪಡೆದರೆ ಯೋಜನೆಯ ಉದ್ದೇಶ ವಿಫಲವಾಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಉತ್ತಮ ಆರ್ಥಿಕ ಹಿನ್ನೆಲೆ ಹೊಂದಿರುವ ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹೆಚ್ಚಿನ ಲಾಭ ಪಡೆದರೆ ಯೋಜನೆಯ ಉದ್ದೇಶ ವಿಫಲವಾಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಚುನಾವಣೆಗೆ ಪೂರ್ವ ಘೋಷಿಸಿದ ಮತ್ತು ಸರ್ಕಾರವು ಅನುಮೋದಿಸಿದ ಐದು ಖಾತರಿಗಳಲ್ಲಿ ಗೃಹ ಲಕ್ಷ್ಮಿಯೂ ಒಂದಾಗಿದೆ. ವಿವಾಹಿತರು, ವಿಚ್ಛೇದಿತರು ಅಥವಾ ನಿರ್ಗತಿಕರಾಗಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಕುಟುಂಬದ ಎಲ್ಲಾ ಯಜಮಾನಿಗೆ ಮಾಸಿಕ 2,000 ರೂ ಪ್ರೋತ್ಸಾಹಧನವನ್ನು ಸರ್ಕಾರ ನೀಡುವ ಯೋಜನೆಯಾಗಿದೆ. 

ಸಾಧನಾ ಮಹಿಳಾ ಸಂಘ ಮತ್ತು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಸೇರಿದಂತೆ ಅನೇಕ ಸಂಘಗಳೊಂದಿಗೆ ಕೆಲಸ ಮಾಡುತ್ತಿರುವ ಗೀತಾ ಮೆನನ್, ಈ ಯೋಜನೆಯು ಮಹಿಳಾ ಪರವಾಗಿದ್ದರೂ, ಸ್ಥಿರ ಆರ್ಥಿಕ ಹಿನ್ನೆಲೆಯಿಂದ ಬಂದವರಿಗೆ ಪ್ರೋತ್ಸಾಹವನ್ನು ನೀಡುವುದು ಸರ್ಕಾರದ ತಪ್ಪು ಕ್ರಮವಾಗಿದೆ. ಇಡೀ ಮಹಿಳಾ ಜನಸಂಖ್ಯೆಯು ಅರ್ಹರಾಗಿದ್ದರೆ, ಕಡಿಮೆ ಆದಾಯದ ಗುಂಪುಗಳ ಅನೇಕರು ವಂಚಿತರಾಗಬಹುದು ಎಂದು ಹೇಳುತ್ತಾರೆ. 

ಆರ್ಥಿಕ ಸ್ವತಂತ್ರ ಸಲಹೆಗಾರ್ತಿ ಜ್ಯೋತಿ ಬಿಜುಕುಮಾರ್, ಯಾವ ಮಹಿಳೆಯರನ್ನು 'ಮನೆಯ ಮುಖ್ಯಸ್ಥರು' ಎಂದು ಪರಿಗಣಿಸಬೇಕು ಎಂಬುದನ್ನು ಗುರುತಿಸುವ ಮಾನದಂಡವನ್ನು ಪ್ರಶ್ನಾರ್ಥಕವಾಗಿದೆ. ಸಾಮಾನ್ಯವಾಗಿ, ಎಲ್ಲಾ ಮನೆಗಳನ್ನು ಪುರುಷರೇ ನಿರ್ವಹಿಸುತ್ತಾರೆ ಎನ್ನುತ್ತಾರೆ. 

ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಮಾನದಂಡಗಳ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಅದನ್ನು ಪರಿಹರಿಸದಿದ್ದರೆ, ಯೋಜನೆಯು ಉತ್ತಮ ಉದ್ದೇಶದಿಂದ ಪ್ರಾರಂಭವಾಗಿ ವಿಫಲಗೊಂಡ ಮತ್ತೊಂದು ಯೋಜನೆಯಾಗಿ ಕೊನೆಗೊಳ್ಳುತ್ತದೆ. ಹೆಚ್ಚು ದುರ್ಬಲ ಗುಂಪುಗಳನ್ನು ತಲುಪಲು ವಿಫಲವಾಗುತ್ತದೆ ಎನ್ನುತ್ತಾರೆ. 

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಜೂನ್ 15 ರಿಂದ ಜುಲೈ 15 ರವರೆಗೆ ತೆರೆದಿರುತ್ತದೆ. ಆಗಸ್ಟ್ 15ರಂದು ಯೋಜನೆ ಅಧಿಕೃತವಾಗಿ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT