ಸಿದ್ದರಾಮಯ್ಯ 
ರಾಜ್ಯ

ಗೆಲ್ಲುವುದಕ್ಕಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರಪೂರ ಘೋಷಣೆ: ಯೋಜನೆ ಜಾರಿಗೆ ತರಲು ಬೊಕ್ಕಸಕ್ಕೆ ಅತ್ಯಧಿಕ ಹೊರೆ!

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಅಂಗನವಾಡಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಕ್ರಮವಾಗಿ 10 ಸಾವಿರದಿಂದ 15 ಸಾವಿರ ರೂ.ಗಳಿಂದ 15,000 ರು ಗಳಿಗೆ ಹಾಗೂ 7,500 ರಿಂದ 12 ಸಾವಿರಗಳಿಗೆ ಏರಿಕೆ ಮಾಡುವುದಾಗಿ ತಿಳಿಸಿತ್ತು,

ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ,  ಬೊಕ್ಕಸಕ್ಕೆ ಹೊರೆಯಾಗುತ್ತಿದೆ, ಇದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಘೋಷಿಸಿದ ಪ್ರಣಾಳಿಕೆ ಭರವಸೆಗಳನ್ನು ಜಾರಿಗೆ ತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಸಂಸ್ಥೆಗಳು ಸಜ್ಜಾಗುತ್ತಿವೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಅಂಗನವಾಡಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಕ್ರಮವಾಗಿ 10 ಸಾವಿರದಿಂದ 15 ಸಾವಿರ ರೂ.ಗಳಿಂದ 15,000 ರು ಗಳಿಗೆ ಹಾಗೂ 7,500 ರಿಂದ 12 ಸಾವಿರಗಳಿಗೆ ಏರಿಕೆ ಮಾಡುವುದಾಗಿ ತಿಳಿಸಿತ್ತು, ಇದರಿಂದ ಸರ್ಕಾರದ ಮೇಲಿನ ಆರ್ಥಿಕ ಒತ್ತಡವನ್ನು ಹೆಚ್ಚಿಸಲಿದೆ.

ರಾಜ್ಯದಲ್ಲಿ 66 ಸಾವಿರ ಅಂಗನವಾಡಿಗಳಿವೆ, ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 12,500 ರೂ. ಸಿಗುತ್ತಿದೆ. ಅವರ ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆಗಳನ್ನು ನಾನು ಒಪ್ಪುವುದಿಲ್ಲ, 15,000 ರೂ ಎಂದರೆ ಅದು ಕೇವಲ 2,500  ರು ಹೆಚ್ಚಳ ಮಾಡುತ್ತಾರೆ ಎಂದು ಅರ್ಥ, ಅದನ್ನು ನಾವು ಒಪ್ಪುವುದಿಲ್ಲ ಅದಕ್ಕಾಗಿ ನಾವು ಹೋರಾಡಬೇಕಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್ ವರಲಕ್ಷ್ಮಿ ಹೇಳಿದ್ದಾರೆ.

ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ನಂತರ ಒಕ್ಕೂಟದ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ಅಥವಾ ಸಮೀಪದಲ್ಲೇ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.

ಇಷ್ಟೇ ಅಲ್ಲ, ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಕಾರ್ಯಕರ್ತರ ಗೌರವಧನವನ್ನು ಮಾಸಿಕ 6,000 ರೂ.ಗಳಿಂದ 8,000 ರೂ.ಗೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಕರ್ನಾಟಕದಲ್ಲಿ ಸುಮಾರು 50,000 ಆಶಾ ಕಾರ್ಯಕರ್ತೆಯರಿದ್ದಾರೆ.

ಅವರಲ್ಲಿ ಹಲವರು ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಕೂಡಲೇ ಭರವಸೆಯನ್ನು ಜಾರಿಗೊಳಿಸದಿದ್ದರೆ ಬೀದಿಗಿಳಿಯಬೇಕಾಗುತ್ತದೆ. ಇದು ಪಂಚವಾರ್ಷಿಕ ಯೋಜನೆಯಾಗಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರೊಬ್ಬರು ಹೇಳಿದರು, ಅವರು ಜುಲೈವರೆಗೆ ಸಮಯ ನೀಡಿ ನಂತರ ಮುಂದಿನ ಕ್ರಮವನ್ನು ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ತಿಂಗಳ ಸಂಬಳದ ಜೊತೆಗೆ ಮಾಸಿಕ 5,000 ಹೆಚ್ಚುವರಿ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ. ''ಪೊಲೀಸ್ ಸಿಬ್ಬಂದಿ ಪ್ರತಿಭಟನೆಗೆ ಬರುವಂತಿಲ್ಲ. ನೈಟ್ ಬೀಟ್‌ನಲ್ಲಿರುವ ಸಿಬ್ಬಂದಿಗೆ 5,000 ರೂ ಪ್ರೋತ್ಸಾಹದಾಯಕವಾಗಿದ್ದರೂ, ಇದು ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ. ಇದನ್ನು ತಕ್ಷಣವೇ ಕಾರ್ಯಗತಗೊಳಿಸದಿರಬಹುದು ಎಂದು ರಾಜ್ಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 25,000 ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಭರವಸೆ ನೀಡುವುದರ ಜೊತೆಗೆ ಹೈನುಗಾರರಿಗೆ ಪ್ರತಿ ಲೀಟರ್‌ಗೆ 5 ರಿಂದ 7 ರೂ.ಗೆ ಆರ್ಥಿಕ ಪ್ರೋತ್ಸಾಹವನ್ನು ಹೆಚ್ಚಿಸುವುದಾಗಿ ಪಕ್ಷವು ಭರವಸೆ ನೀಡಿತು, ಇದು ಮತ್ತೆ ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಹೊರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT