ಮಂಗಳೂರು ವಿಮಾನ ನಿಲ್ದಾಣದಲ್ಲಿ ಶೇ.100 ಎಲ್ಇಡಿ ಲೈಟ್ ವ್ಯವಸ್ಥೆ 
ರಾಜ್ಯ

ವಿಶ್ವ ಪರಿಸರ ದಿನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಶೇ.100 ಎಲ್ಇಡಿ ಲೈಟ್ ವ್ಯವಸ್ಥೆ

ಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇ 100ರಷ್ಟು ಎಲ್‌ಇಡಿ ಬಲ್ಬ್‌ಗಳನ್ನು ಬಳಕೆ ಮಾಡಲಾಗುತ್ತಿದೆ. 

ಮಂಗಳೂರು: ಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇ 100ರಷ್ಟು ಎಲ್‌ಇಡಿ ಬಲ್ಬ್‌ಗಳನ್ನು ಬಳಕೆ ಮಾಡಲಾಗುತ್ತಿದೆ. 

ಹೌದು.. ವಿಶ್ವ ಪರಿಸರ ದಿನದ ಮುನ್ನಾದಿನದಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇದೀಗ ಶೂನ್ಯ ಶಾಖ ಗುರಿಯನ್ನು ಸಾಧಿಸುವ ಸಂಕಲ್ಪದಲ್ಲಿ ಮತ್ತೊಂದು ನಿರ್ಣಾಯಕ ಮೈಲಿಗಲ್ಲನ್ನು ತಲುಪಿದೆ. ವಿಮಾನ ನಿಲ್ದಾಣವು ತನ್ನ ಎಲ್ಲಾ ಸಾಂಪ್ರದಾಯಿಕ ದೀಪಗಳನ್ನು ಹಂತ ಹಂತವಾಗಿ ಶಕ್ತಿ-ಸಮರ್ಥ ಎಲ್ ಇಡಿ ಬೆಳಕಿನ ವ್ಯವಸ್ಥೆಗೆ ಬದಲಾಯಿಸುವ ಮೂಲಕ ಇದನ್ನು ಮಾಡಿದೆ.

ಒಟ್ಟಾರೆಯಾಗಿ 1,111 ಸಾಂಪ್ರದಾಯಿಕ ಬಲ್ಬ್‌ಗಳನ್ನು ಎಲ್‌ಇಡಿಗೆ ಬದಲಾಯಿಸಲಾಗಿದ್ದು, ಇದರಿಂದ ವರ್ಷಕ್ಕೆ 1.88 ಲಕ್ಷ ಕಿಲೋವ್ಯಾಟ್ ವಿದ್ಯುತ್ ಉಳಿಕೆಯಾಗುತ್ತದೆ. ಈ ಕ್ರಮವು ವರ್ಷಕ್ಕೆ 148.9 ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ವಾಯು ಸಂಚಾರ ಸೇವೆಗಳ (ಎನ್ಎಟಿಎಸ್) ಕಟ್ಟಡ ಪ್ರದೇಶದಲ್ಲಿ ಅತಿ ಹೆಚ್ಚು ವಿದ್ಯುತ್‌ ಉಳಿತಾಯವಾಗುತ್ತದೆ.  ಈ ಪ್ರದೇಶದಲ್ಲಿ 752 ಎಲ್ಇಡಿ ದೀಪಗಳ ಬಳಕೆಯಿಂದ ವರ್ಷಕ್ಕೆ 1.17 ಲಕ್ಷ ಕಿಲೋವ್ಯಾಟ್ ವಿದ್ಯುತ್ ಉಳಿತಾಯ ಆಗಬಹುದೆಂದು ಅಂದಾಜಿಸಲಾಗಿದೆ. ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದಲ್ಲಿ, ಏರ್ ಸೈಡ್, ಹಳೆಯ ಟರ್ಮಿನಲ್ ಕಟ್ಟಡ ಮತ್ತು ನ್ಯಾಟ್ಸ್ ಪ್ರದೇಶದಲ್ಲಿ 98 ಸಾಂಪ್ರದಾಯಿಕ ದೀಪಗಳನ್ನು ಎಲ್ಇಡಿ ದೀಪಗಳಾಗಿ ಬದಲಾಯಿಸಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಟಣೆ
‘ವಿಮಾನ ನಿಲ್ದಾಣವು ನಿಯಂತ್ರಿತ ಬೆಳಕಿನ ವ್ಯವಸ್ಥೆಗೆ ಒಳಪಟ್ಟಿದೆ. ಟೈಮರ್ ಬಳಕೆ ಮಾಡುವುದರಿಂದ ಅಗತ್ಯ ಇಲ್ಲದ ಕಡೆಗಳಲ್ಲಿ ದೀಪಗಳು ಆಫ್‌ ಆಗುತ್ತವೆ. ಟೈಮರ್‌ಗಳ ಬಳಕೆಯು ನಿರ್ದಿಷ್ಟ ಸಮಯಗಳಲ್ಲಿ ಬೀದಿ ದೀಪಗಳನ್ನು ಆನ್ ಮತ್ತು ಆಫ್‌ ಮಾಡುವ ವ್ಯವಸ್ಥೆಯನ್ನು ಹೊಂದಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

752 ಎಲ್ಇಡಿ ದೀಪಗಳ ಬಳಕೆಯೊಂದಿಗೆ ವಿಮಾನ ನಿಲ್ದಾಣವು ವಾರ್ಷಿಕ 1.17-ಲಕ್ಷ kWH ಅನ್ನು ಉಳಿಸುವ ರಾಷ್ಟ್ರೀಯ ವಾಯು ಸಂಚಾರ ಸೇವೆಗಳ ಕಟ್ಟಡದ ಪ್ರದೇಶದಲ್ಲಿ ದೊಡ್ಡ ಉಳಿತಾಯವನ್ನು ಕಾಣಬಹುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT