ಜಗಳ ನಡೆದು ಹತ್ಯೆಗೊಂಡ ಯುವಕ 
ರಾಜ್ಯ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ರಾಮನಗರ: ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26 ವರ್ಷ) ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT