ಸಾಂದರ್ಭಿಕ ಚಿತ್ರ 
ರಾಜ್ಯ

ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರು

ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ನಗರದಲ್ಲಿ ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಹೈದರಾಬಾದ್ ಮೂಲದ ಆಕಾಂಕ್ಷಾ ವಿದ್ಯಾಸಾಗರ್ (23) ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಆರೋಪಿಯನ್ನು ದೆಹಲಿ ಮೂಲದ ಅರ್ಪಿತ್ ಎಂದು ಗುರುತಿಸಲಾಗಿದೆ.

ಇಬ್ಬರೂ ಸ್ವಲ್ಪ ಕಾಲ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಇಬ್ಬರು ಜಗಳವಾಡಿದ್ದರು ಮತ್ತು ಪ್ರತ್ಯೇಕಗೊಳ್ಳಲು ನಿರ್ಧರಿಸಿದ್ದರು. ಸೋಮವಾರ ಸಂಜೆ ಇಬ್ಬರ ನಡುವೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಕೋಪದ ಭರಾಟೆಯಲ್ಲಿ ಅರ್ಪಿತ್ ಆಕಾಂಕ್ಷಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಗಳವಾರ ಹೇಳಿಕೆ ನೀಡಿರುವ ಹೆಚ್ಚುವರಿ ಕಮಿಷನರ್ (ಪೂರ್ವ) ಎಂ.ಚಂದ್ರಶೇಖರ್, ಆಕಾಂಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ಸ್ನೇಹಿತೆಯ ಪಾತ್ರದ ಬಗ್ಗೆ ನಮಗೆ ಶಂಕೆ ಇದೆ. ಆರೋಪಿಯನ್ನು ಬಂಧಿಸಲು ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಆರೋಪಿ ಕೊಲೆ ಮಾಡಿದ ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ. ಆಕಾಂಕ್ಷಳನ್ನು ಕೊಂದ ನಂತರ ಆಕೆಯನ್ನು ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಲು ಯತ್ನಿಸಿದ. ಆದರೆ, ವಿಫಲವಾಗಿದೆ ಎಂದು ಚಂದ್ರಶೇಖರ್ ಹೇಳಿದರು.

ಪೊಲೀಸರ ಪ್ರಕಾರ, ಶವವನ್ನು ನೇಣು ಹಾಕಲು ಪ್ರಯತ್ನ ಮಾಡಿದ ನಂತರ ಅರ್ಪಿತ್ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಪಾಳಿಯ ನಂತರ ಮತ್ತೊಬ್ಬ ರೂಂಮೇಟ್ ಮನೆಗೆ ಬಂದ ನಂತರ ಘಟನೆ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!