ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ. 
ರಾಜ್ಯ

ಬಿಬಿಎಂಪಿ ಚುನಾವಣೆ ವಿಳಂಬದಿಂದಾಗಿ ನಗರದ ಅಭಿವೃದ್ಧಿ ಕುಂಠಿತ: ರಾಮಲಿಂಗಾ ರೆಡ್ಡಿ

ಸತತ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಸದ ಕಾರಣ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಹೇಳಿದರು.

ಬೆಂಗಳೂರು: ಸತತ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಸದ ಕಾರಣ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಹೇಳಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಇದರಂತೆ ಚುನಾವಣೆಗೆ ಸಿದ್ಧತೆಗಳನ್ನೂ ಆರಂಭಿಸಿದೆ. ನಿನ್ನೆಯಷ್ಟೇ ರಾಮಲಿಂಗಾ ರೆಡ್ಡಿಯವರು ಚುನಾವಣೆಗೆ ಪೂರ್ವ ಸಿದ್ಧತೆಗಳಿಗಾಗಿ ಅಧಿಕಾರಿಗಳು, ಸದಸ್ಯರೊಂದಿಗೆ ಸಭೆ ನಡೆಸಿ, ಸಲಹೆಗಳ ಸ್ವೀಕರಿಸಿದರು.

ಸಭೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾಯಿತ ಸಂಸ್ಥೆ ಇಲ್ಲದ ಕಾರಣ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಹಲವು ಸದಸ್ಯರು ಶೀಘ್ರಗತಿ ಚುನಾವಣೆ ನಡೆಯಬೇಕೆಂದು ಬಯಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅದನ್ನೇ ಬಯಸುತ್ತಿದ್ದಾರೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ. ಈ ನಡುವೆ ಬೆಂಗಳೂರಿನ ಕಾಂಗ್ರೆಸ್ ನಾಯಕರಿಗೆ ಚುನಾವಣೆಗೆ ಸಿದ್ಧರಾಗುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರಕಾರ ಹಲವು ವಾರ್ಡ್‌ಗಳನ್ನು ತೆಗೆದು ಅನ್ಯಾಯ ಮಾಡಿದೆ ಎಂದು ಸಭೆಯಲ್ಲಿ ಹಲವು ಸದಸ್ಯರು ಹೇಳಿದರು. ಹಿಂದಿನ ಸರ್ಕಾರವು ವಿಂಗಡಣೆಯ ನೆಪದಲ್ಲಿ ಹಲವು ವಾರ್ಡ್‌ಗಳನ್ನು ಬದಲಿಸಿದೆ. ಗಾಂಧಿನಗರದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಈಗ ಎಲ್ಲಾ ವಾರ್ಡ್‌ಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಮೀಸಲಾತಿ ಮಾತೃಕೆ ಆಧರಿಸಿ ಸರ್ಕಾರ ನವೆಂಬರ್‌ನಲ್ಲಿ ಚುನಾವಣೆ ನಡೆಸಬೇಕು ಎಂದು ಸದಸ್ಯರು ಒತ್ತಾಯಿಸಿದ್ದಾರೆ. ನ್ಯಾಯಾಲಯದ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ. ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ ಮೀಸಲಾತಿಯ ಕುರಿತಂತೆಯೂ ಕೆಲಸ ಮಾಡುತ್ತದೆ. ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT