ಅಪಘಾತದ ದೃಶ್ಯ 
ರಾಜ್ಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ, ಐವರ ಸಾವು, 13 ಜನರಿಗೆ ಗಾಯ

ರಾಜ್ಯದಲ್ಲಿ ಅಪಘಾತದಿಂದ ದುರ್ಮರಣ ಘಟನೆ ಮುಂದುವರಿದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಐವರು ಮಂಗಳವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.

ಬಳಿಚಕ್ರ(ಯಾದಗಿರಿ): ರಾಜ್ಯದಲ್ಲಿ ಅಪಘಾತದಿಂದ ದುರ್ಮರಣ ಘಟನೆ ಮುಂದುವರಿದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಐವರು ಮಂಗಳವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.

ಮುನೀರ್( 40), ನಯಾಮತ್ (40), ಮುದಸ್ಸೀರ್ (12), ರಮಿಜಾ ಬೇಗಂ (50) ಮತ್ತು ಸುಮ್ಮಿ (12) ಮೃತ ದುರ್ದೈವಿಗಳು.ಮೃತರ ಪೈಕಿ ಆಂಧ್ರಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎಂದು ತಿಳಿದು ಬಂದಿದೆ. ಇನ್ನುಳಿದ ಮೂವರು ವೆಲಗುಡ ಗ್ರಾಮದವರಾಗಿದ್ದಾರೆ. 

ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೂಸರ್ ನಲ್ಲಿದ್ದವರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು.

ಈ ವೇಳೆ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತರಾಗಿದ್ದಾರೆ. ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT