ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ 
ರಾಜ್ಯ

ಕಂಬಾಳು ಮಠದ ಸ್ವಾಮೀಜಿಗೆ 'ಫೇಸ್ ಬುಕ್' ಗೆಳತಿ ಪಂಗನಾಮ: ಭೂಮಿ ಕೊಡುವುದಾಗಿ ನಂಬಿಸಿ 35 ಲಕ್ಷ ರು. ದೋಖಾ!  

ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ.

ಬೆಂಗಳೂರು: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ.

ಫೇಸ್‌ಬುಕ್ ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು 35 ಲಕ್ಷ ರು ಕಳೆದುಕೊಂಡಿದ್ದಾರೆ, ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ವಾಮೀಜಿ ಅವರನ್ನು 2020ರಲ್ಲಿ ಪರಿಚಯ ಮಾಡಿಕೊಂಡಿದ್ದ ಯುವತಿ, ನಾನಾ ಕಾರಣ ನೀಡಿ ಹಣ ಪಡೆದಿದ್ದಾಳೆ. ಹಣ ವರ್ಗಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು ಸ್ವಾಮೀಜಿ ಬಳಿ ಇವೆ. ಯಾವ ಖಾತೆಗೆ ಹಣ ಜಮೆ ಆಗಿದೆ. ಬೇರೆ ಯಾರೆಲ್ಲ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಫೇಸ್‌ಬುಕ್‌ ನಲ್ಲಿ ವರ್ಷಾ ಹೆಸರಿನ ಖಾತೆಯಿಂದ 2020ರಲ್ಲಿ ಫ್ರೆಂಡ್‌ ರಿಕ್ವೆಸ್ಟ್ ಬಂದಿತ್ತು. ಅದನ್ನು ಸ್ವೀಕರಿಸಿದ್ದೆ. ನಂತರ, ಯುವತಿ ಚಾಟಿಂಗ್ ಮಾಡಲಾರಂಭಿಸಿದ್ದಳು. ಆಧ್ಯಾತ್ಮಿಕವಾಗಿ ಆಸಕ್ತಿ ಇದೆ ಎಂದು ಹೇಳಿ, ಮೊಬೈಲ್ ನಂಬರ್ ಪಡೆದುಕೊಂಡಿದ್ದಳು. ತನ್ನ ಮೊಬೈಲ್‌ ನಂಬರ್ ಸಹ ಕೊಟ್ಟಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತನ್ನ ಹೆಸರಿನಲ್ಲಿ ಹೆಚ್ಚು ಜಮೀನಿದ್ದು, ಅದನ್ನು ಮಠದ ಹೆಸರಿಗೆ ಬರೆಯುವುದಾಗಿ ಹೇಳಿದ್ದ ಯುವತಿ ಹಂತ ಹಂತವಾಗಿ  35 ಲಕ್ಷ ರು ಹಣ ಪಡೆದಿದ್ದಳು.  ಜಮೀನು ದಾಖಲೆ ತರುವ ವೇಳೆ ತನ್ನ ಮೇಲೆ ಹಲ್ಲೆಯಾಗಿದ್ದು, ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವುದಾಗಿ ಯುವತಿ ಹೇಳಿದ್ದಳು.

ಆಸ್ಪತ್ರೆ ಬಿಲ್ ಪಾವತಿಸಲು ಸಹ ಹಣ ಕೇಳಿದ್ದಳು. ಆಕೆ ಮೇಲೆ ಅನುಮಾನ ಬಂದಿತ್ತು. ಪರಿಚಯಸ್ಥರೊಬ್ಬರನ್ನು ಆಸ್ಪತ್ರೆಗೆ ಕಳುಹಿಸಿ ವಿಚಾರಿಸಿದಾಗ, ವರ್ಷ ಎಂಬುವವರು ಯಾರೂ ದಾಖಲಾಗಿಲ್ಲವೆಂಬುದು ಗೊತ್ತಾಗಿತ್ತು.  ಆನಂತರ ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ವಾಪಸು ಕೊಡುವಂತೆ ಸ್ವಾಮೀಜಿಯನ್ನು ಬೆದರಿಸಿದ್ದರು. ಇದಾದ ನಂತರವೇ ಸ್ವಾಮೀಜಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT