ಸಂಗ್ರಹ ಚಿತ್ರ 
ರಾಜ್ಯ

ತುಮಕೂರು ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲು; 30 ಜನರಿಗೆ ಗಾಯ

ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ತುಮಕೂರು: ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮಾನಿನಕೆರೆ ಗ್ರಾಮದಲ್ಲಿ 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆಸಲಾಗುತ್ತಿತ್ತು. ಜಾತ್ರೆಗೆ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು.

ಹೆಚ್ಚು ಜನರು ಜಾತ್ರೆಗೆ ಸೇರಿದ್ದರಿಂದ ಸ್ಥಳದಲ್ಲಿ ನೂಕು ನುಗ್ಗಲು ಶುರುವಾಗಿದೆ. ಪರಿಣಾಮ 30 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಧೀಗ ಗಾಯಾಳುಗಳನ್ನು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್