ಸೈನಿಕರು 
ರಾಜ್ಯ

ಸಕಲೇಶಪುರ: ಸೇನಾ ಕ್ಯಾಂಪ್‌ನಲ್ಲಿ ಊಟ ಸೇವಿಸಿ 42 ಸೈನಿಕರು ಅಸ್ವಸ್ಥ, ಆರೋಗ್ಯ ವಿಚಾರಿಸಿದ ಶಾಸಕ ಮಂಜು!

ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ಸೈನಿಕರು ಅಸ್ವಸ್ಥಗೊಂಡಿದ್ದು ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ: ಸಕಲೇಶಪುರ ತಾಲೂಕಿನ ಕುಡುಗರವಳ್ಳಿಯಲ್ಲಿರುವ ಸೇನಾ ಚಾಲನಾ ತರಬೇತಿ ಶಿಬಿರದ ಕನಿಷ್ಠ 42 ತರಬೇತಿ ಯೋಧರು ಬುಧವಾರ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದಾರೆ. 

103 ಪ್ರಶಿಕ್ಷಣಾರ್ಥಿಗಳು ಕುಡುಗರವಳ್ಳಿ ಸೇನಾ ಶಿಬಿರದಲ್ಲಿ ತಂಗಿದ್ದು ಮಂಗಳವಾರ ರಾತ್ರಿ ಊಟ ಮಾಡಿದರು. ಮಂಗಳವಾರ ರಾತ್ರಿ ಚಪಾತಿ, ಆಳು ಪನ್ನೀರ್, ಸಬ್ಜಿ, ಪಾಯಸಂ, ಅನ್ನ ಸಾಂಬಾರ್, ರೊಟ್ಟಿ ಮತ್ತು ದಾಲ್ ಸೇವಿಸಿದ್ದರು. 

ಶಿಬಿರಕ್ಕೆ ಭೇಟಿ ನೀಡಿದ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರ ಪ್ರಕಾರ, ಸುಮಾರು 60 ತರಬೇತಿದಾರರು ಅಸ್ವಸ್ಥತೆಯನ್ನು ಅನುಭವಿಸಿದ್ದರು. ಬುಧವಾರ ಬೆಳಗಿನ ಉಪಾಹಾರಕ್ಕೂ ಮೊದಲು ಅವರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ತರಬೇತಿ ಅಧಿಕಾರಿಗಳು 42 ಪ್ರಶಿಕ್ಷಣಾರ್ಥಿಗಳನ್ನು ವಾಹನದಲ್ಲಿ ಕ್ರೌಫೋರ್ಡ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಕೂಡಲೇ ಅಸ್ವಸ್ಥಗೊಂಡಿದ್ದ ಸೈನಿಕರಿಗೆ ಚಿಕಿತ್ಸೆ ಒದಗಿಸಲಾಯಿತು. ಈ ಪೈಕಿ 21 ಯೋಧರು ಅಪಾಯದಿಂದ ಪಾರಾಗಿದ್ದು, ಉಳಿದವರು ಚೇತರಿಸಿಕೊಂಡಿದ್ದು, ಕ್ರಮೇಣ ಔಷಧಿಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 

ಆಹಾರ ಮತ್ತು ಸುರಕ್ಷತಾ ಇಲಾಖೆಯ ಅಧಿಕಾರಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಯ ಮಾಹಿತಿ ತಿಳಿದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ಬಗ್ಗೆ ವಿಶೇಷ ಗಮನ ಹರಿಸುವಂತೆ ಆರೋಗ್ಯ ಸಿಬ್ಬಂದಿಗೆ ಸೂಚಿಸಿದ್ದಾರೆ. ವಿವಿಧ ರಾಜ್ಯಗಳ ಸೇನಾ ಶಿಬಿರಗಳ ಸೈನಿಕರನ್ನು ಮಿಲಿಟರಿ ವಾಹನ ಚಾಲನಾ ತರಬೇತಿಗೆ ನಿಯೋಜಿಸಲಾಗುತ್ತದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಂದಾಗಿದ್ದು, ಚಾಲನಾ ತರಬೇತಿಗಾಗಿ ಮಿಲಿಟರಿ ಅಧಿಕಾರಿಗಳು ಹೆಚ್ಚಾಗಿ ಈ ಹೆದ್ದಾರಿಯನ್ನು ಆಯ್ಕೆ ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT