ಸೆರೆಸಿಕ್ಕ ಪುಂಡಾನೆ. 
ರಾಜ್ಯ

ಬಂಡೀಪುರ ಅರಣ್ಯಾಧಿಕಾರಿಗಳಿಂದ ಪುಂಡಾನೆ ಸೆರೆ: ರೈತರು ನಿಟ್ಟುಸಿರು

ಕುಂದುಕೆರೆ ಮತ್ತು ಗೋಪಾಲಸ್ವಾಮಿ ಬೆಟ್ಟ ಅರಣ್ಯದಂಚಿನ ಗ್ರಾಮಗಳಲ್ಲಿ ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶಪಡಿಸಿ, ಗ್ರಾಮಸ್ಥರ ತುಳಿದು ಕೊಂದು ಹಾಕಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಕೊನೆಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಮೈಸೂರು: ಕುಂದುಕೆರೆ ಮತ್ತು ಗೋಪಾಲಸ್ವಾಮಿ ಬೆಟ್ಟ ಅರಣ್ಯದಂಚಿನ ಗ್ರಾಮಗಳಲ್ಲಿ ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶಪಡಿಸಿ, ಗ್ರಾಮಸ್ಥರ ತುಳಿದು ಕೊಂದು ಹಾಕಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಕೊನೆಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಕುಂದುಕೆರೆ, ಜಿ.ಎಸ್.ಬೆಟ್ಟ ವ್ಯಾಪ್ತಿಯ ಕೆಬ್ಬೆಪುರ, ಹುಂಡೀಪುರ, ಚೌಡಹಳ್ಳಿ, ಜಕ್ಕಹಳ್ಳಿ, ಮಂಗಲ, ಎಲೆಚೆಟ್ಟಿ, ಚಿಕ್ಕಯೆಲೆಚೆಟ್ಟಿ ಗ್ರಾಮಗಳಲ್ಲಿ ಕಳೆದೊಂದು ವರ್ಷದಿಂದ ಆನೆಗಳು ದಾಳಿ ನಡೆಸುತ್ತಿದ್ದು, ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿತ್ತು. ಅಲ್ಲದೆ, ಸಾರ್ವಜನಿಕರ ಮೇಲೂ ದಾಳಿಗೆ ಮುಂದಾಗುತ್ತಿದ್ದ. ಬೆಳೆಗಳ ನಾಶದಿಂದಾಗಿ ರೈತರು ಅಪಾರ ನಷ್ಟವನ್ನು ಎದುರಿಸುತ್ತಿದ್ದರು.

ಪುಂಡಾನೆಯನ್ನು ಸೆರೆ ಹಿಡಿಯರು ಅರಣ್ಯಾಧಿಕಾರಿಗಳು ಕಳೆದ 5 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು. ಇದರಂತೆ ನಿನ್ನೆ ಆನೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸೆರೆ ಸಿಕ್ಕಿರುವ ಪುಂಡಾನೆ ಜೂನ್ 15, 2022 ರಂದು ಶಿವಪುರ ಗ್ರಾಮದಲ್ಲಿ ಗ್ರಾಮಸ್ಥರೊಬ್ಬರನ್ನು ತುಳಿದು ಕೊಂದಿತ್ತು, ಜೊತೆಗೆ ಹಲವಾರು ತೋಟದ ಮನೆಗಳಿಗೆ ನುಗ್ಗಿ ಆಸ್ತಿಗಳಿಗೆ ಹಾನಿ ಮಾಡಿತ್ತು. ಅಲ್ಲದೆ, ಭತ್ತದ ಗದ್ದೆಗಳ ಮೇಲೂ ದಾಳಿ ಮಾಡುತ್ತಿತ್ತು.

ಆನೆಗಳ ನಿರಂತರ ದಾಳಿಯಿಂದ ಕಂಗಾಲಾದ ಗ್ರಾಮಸ್ಥರು 2023ರ ಮೇ 15ರಿಂದ ಹುಂಡಿಪುರ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಗ್ರಾಮಸ್ಥರು ಆನೆಯನ್ನು ಆದಷ್ಟು ಬೇಗ ಸೆರೆಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT