ನಿರ್ಮಲಾ ಈರಪ್ಪ 
ರಾಜ್ಯ

ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆ: ವಾಂತಿ ಭೇದಿಯಿಂದ 10 ವರ್ಷದ ಬಾಲಕಿ ಸಾವು

ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ 10 ವರ್ಷದ ಬಾಲಕಿ ನಿರ್ಮಲಾ ಈರಪ್ಪ ಇಂದು ಮೃತಪಟ್ಟಿದ್ದಾಳೆ. 

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ 10 ವರ್ಷದ ಬಾಲಕಿ ನಿರ್ಮಲಾ ಈರಪ್ಪ ಇಂದು ಮೃತಪಟ್ಟಿದ್ದಾಳೆ. 

ಕಳೆದ ರಾತ್ರಿಯೇ ಬಾಲಕಿಗೆ ತೀವ್ರ ವಾಂತಿ-ಬೇಧಿ ಉಂಟಾಗಿತ್ತು. ಆದರೆ ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯಲ್ಲು ಸಾಧ್ಯವಾಗಿರಲಿಲ್ಲ. ಇಂದು ಬೆಳಗ್ಗೆ ತೀವ್ರ ಅಸ್ವಸ್ಥಳಾಗಿದ್ದ ನಿರ್ಮಲಾಳನ್ನು ಆಸ್ಪತ್ರೆಗೆ ದಾಖಲಿಸು ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕೊಪ್ಪಳದ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65 ವರ್ಷದ ವೃದ್ಧೆ ಹೊನ್ನಮ್ಮ ಶಿವಪ್ಪ ಎಂಬುವರು ಮೃತಪಟ್ಟಿದ್ದು ಇದೀಗ ಬಾಲಕಿಯೂ ಕಲುಷಿತ ನೀರು ಸೇವನೆಯಿಂದಲೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. 

ಸ್ಥಳಕ್ಕೆ ಡಿಎಚ್ಓ ಡಾ. ಅಲಕಾನಂದ ಮಳಗಿ, ಟಿಹೆಚ್ಓ ಡಾ. ಆನಂದ ಗೋಟೂರು, ಇಓ ಶಿವಪ್ಪ ಸುಭೇದಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT