ಅಲೋಕ್ ಕುಮಾರ್ 
ರಾಜ್ಯ

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 

ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ 1994 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಿಸಲಾಗಿದೆ.

ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದಲ್ಲದೆ, ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!