ಉಡುಪಿ ಅದಮಾರ್ ಮಠದ ಸಂಪ್ರದಾಯ ಪ್ರಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ(ಫೋಟೋ ಕೃಪೆ-ಅದಮಾರು ಮಠದ ಫೇಸ್ ಬುಕ್ ಖಾತೆಯಿಂದ) 
ರಾಜ್ಯ

ಉಡುಪಿ ಮಠದ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ  ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ವಿವಾಹ ಮತ್ತು ಆರತಕ್ಷತೆ ಸ್ಥಳವೊಂದರಲ್ಲಿ ನೆರವೇರಿತು.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ  ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ವಿವಾಹ ಮತ್ತು ಆರತಕ್ಷತೆ ಸ್ಥಳವೊಂದರಲ್ಲಿ ನೆರವೇರಿತು.

ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.

ವಧು ನಸುಕೆಂಪು ಬಣ್ಣದ ಸೀರೆ ಉಟ್ಟಿದ್ದರೆ, ವರ ಬಿಳಿ ಪಂಚೆ, ಶಾಲನ್ನು ಧರಿಸಿದ್ದರು. ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯಲ್ಲಿ ಕಾಣಿಸಿಕೊಂಡರು.

ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲ ಸೀತಾರಾಮನ್ ಅವರಿಗೆ ನೀಡಿದರು. ಪುತ್ರಿಯ ವಿವಾಹದಲ್ಲಿ ಕೇಂದ್ರ ಸಚಿವೆ ಲಗುಬಗೆಯಿಂದ ಪಾಲ್ಗೊಂಡಿದ್ದು ಕಂಡುಬಂತು. ಅಂದಹಾಗೆ ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT