ಡಿ.ಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ ಮತ್ತು ಮಧು ಬಂಗಾರಪ್ಪ 
ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಬೆಂಗಳೂರು ನಗರಕ್ಕೆ ಡಿಕೆಶಿ, ಮೈಸೂರಿಗೆ ಮಹಾದೇವಪ್ಪ, ರಾಮನಗರಕ್ಕೆ ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ.

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಣತೊಟ್ಟಿದ್ದು, ಹಲವು ಸಚಿವರು ತಮ್ಮ ತಮ್ಮ ಜಿಲ್ಲೆಯ ಮೇಲೆ ಕಣ್ಣೀಟ್ಟಿದ್ದರು. ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು, ಅದರಲ್ಲೂ ಮುಖ್ಯವಾಗಿ ಒಂದೇ ಜಿಲ್ಲೆಯ ಇಬ್ಬರು ಸಚಿವರುಗಳ ನಡುವೆ ಭಾರೀ ಲಾಬಿಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ತಲೆನೋವಾಗಿತ್ತು. ಆದರೆ, ಇದೀಗ ಎಲ್ಲಾ ಗೊಂದಲಗಳನ್ನು ನಿವಾರಿಸಿ ಅಂತಿಮವಾಗಿ ಜಿಲ್ಲಾ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಉಸ್ತುವಾರಿ ಸಚಿವ- ಡಿ.ಕೆ.ಶಿವಕುಮಾರ್​

    ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್​

    ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್​.ಕೆ.ಪಾಟೀಲ್

    ಬೆಂಗಳೂರು ಗ್ರಾಮಾಂತರ-ಕೆ.ಹೆಚ್​.ಮುನಿಯಪ್ಪ

    ರಾಮಲಿಂಗಾರೆಡ್ಡಿ-ರಾಮನಗರ

    ಕೆ.ಜೆ.ಜಾರ್ಜ್​-ಚಿಕ್ಕಮಗಳೂರು

    ಎಂ.ಬಿ.ಪಾಟೀಲ್​-ವಿಜಯಪುರ

    ದಿನೇಶ್ ಗುಂಡೂರಾವ್​-ದಕ್ಷಿಣ ಕನ್ನಡ

    ಹೆಚ್​.ಸಿ.ಮಹದೇವಪ್ಪ-ಮೈಸೂರು,
    
    ಸತೀಶ್ ಜಾರಕಿಹೊಳಿ-ಬೆಳಗಾವಿ
    
   ಪ್ರಿಯಾಂಕ್​ ಖರ್ಗೆ-ಕಲಬುರಗಿ
   
   ಶಿವಾನಂದಪಾಟೀಲ್-ಹಾವೇರಿ
 
   ಜಮೀರ್​ ಅಹ್ಮದ್ ಖಾನ್​​-ವಿಜಯನಗರ
 
   ಶರಣಬಸಪ್ಪ ದರ್ಶನಾಪುರ-ಯಾದಗಿರಿ

    ಈಶ್ವರ್ ಖಂಡ್ರೆ-ಬೀದರ್,

    ಚಲುವರಾಯಸ್ವಾಮಿ-ಮಂಡ್ಯ

    ಎಸ್​.ಎಸ್​.ಮಲ್ಲಿಕಾರ್ಜುನ್​-ದಾವಣಗೆರೆ

    ಸಂತೋಷ್ ಲಾಡ್-ಧಾರವಾಡ

    ಶರಣಪ್ರಕಾಶ್ ಪಾಟೀಲ್​-ರಾಯಚೂರು

    ಆರ್​.ಬಿ.ತಿಮ್ಮಾಪುರ-ಬಾಗಲಕೋಟೆ

    ಕೆ.ವೆಂಕಟೇಶ್​-ಚಾಮರಾಜನಗರ

    ಕೊಪ್ಪಳ-ಶಿವರಾಜ್​ ತಂಗಡಗಿ

    ಡಿ.ಸುಧಾಕರ್​-ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ

    ಬಿ.ನಾಗೇಂದ್ರ-ಬಳ್ಳಾರಿ

    ಕೆ.ಎನ್​.ರಾಜಣ್ಣ-ಹಾಸನ

    ಭೈರತಿ ಸುರೇಶ್​-ಕೋಲಾರ

    ಲಕ್ಷ್ಮೀ ಹೆಬ್ಬಾಳ್ಕರ್​-ಉಡುಪಿ

    ಮಂಕಾಳ್ ವೈದ್ಯ-ಉತ್ತರ ಕನ್ನಡ

    ಮಧು ಬಂಗಾರಪ್ಪ-ಶಿವಮೊಗ್ಗ

    ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ

    ಎನ್​.ಎಸ್​.ಬೋಸರಾಜು-ಕೊಡಗು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT