ಸಂಗ್ರಹ ಚಿತ್ರ 
ರಾಜ್ಯ

1,344 ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ

ರೌಡಿಸಂ ಮುಕ್ತ ಬೆಂಗಳೂರು ಆಗಬೇಕೆಂದು ಡಿಜಿಪಿ ಹಾಗೂ ಆಯುಕ್ತರ ಸೂಚನೆ ಬೆನ್ನಲ್ಲೇ ರಾಜಧಾನಿಯ 1344 ರೌಡಿ ಶೀಟರ್ ಗಳ ಮನೆಗಳ ಮೇಲೆ ಗುರುವಾರ ಪೊಲೀಸರು ದಿಢೀರ್ ದಾಳಿ ನಡೆಸಿ, ಬಿಸಿ ಮುಟ್ಟಿಸಿದರು.

ಬೆಂಗಳೂರು: ರೌಡಿಸಂ ಮುಕ್ತ ಬೆಂಗಳೂರು ಆಗಬೇಕೆಂದು ಡಿಜಿಪಿ ಹಾಗೂ ಆಯುಕ್ತರ ಸೂಚನೆ ಬೆನ್ನಲ್ಲೇ ರಾಜಧಾನಿಯ 1344 ರೌಡಿ ಶೀಟರ್ ಗಳ ಮನೆಗಳ ಮೇಲೆ ಗುರುವಾರ ಪೊಲೀಸರು ದಿಢೀರ್ ದಾಳಿ ನಡೆಸಿ, ಬಿಸಿ ಮುಟ್ಟಿಸಿದರು.

ನಗರದಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು, ಮುಂಜಾನೆಯೇ ತಮ್ಮ ಮನೆ ಬಾಗಿಲಿಗೆ ಬಂದ ಪೊಲೀಸರನ್ನು ಕಂಡು ರೌಡಿಗಳು ಬೆಚ್ಚಿಬಿದ್ದರು.

ದಾಳಿ ವೇಳೆ ಪೊಲೀಸರು 9.01 ಕೆಜಿ ಗಾಂಜಾ, ಮಾರಕಾಸ್ತ್ರಗಳು ಮತ್ತು ಕದ್ದ ವಾಹನಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ 2 ಪ್ರಕರಣ ಹಾಗೂ ಎನ್‍ಡಿಪಿಎಸ್ ಕಾಯ್ದೆಯಡಿ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಲ್ಲದೆ, ಈ ಕಾರ್ಯಾಚರಣೆಯಲ್ಲಿ ವಿಚಾರಣಾ ಪ್ರಕರಣಗಳಲ್ಲಿ ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ ರೌಡಿಗಳ ವಿರುದ್ಧದ 46 ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ರೌಡಿಗಳನ್ನು ಪತ್ತೆ ಮಾಡಿ, ವಶಕ್ಕೆ ಪಡೆದು ಸಂಬಂಧಪಟ್ಟ ನ್ಯಾಯಾಲಯಗಳಿಗೆ ಹಾಜರು ಪಡಿಸಲಾಗಿದೆ.

ಬಸವೇಶ್ವರನಗರ ಪೊಲೀಸರು ಸಂದೀಪ್‌ ಅಲಿಯಾಸ್‌ ದೂಬಿಯಿಂದ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರೆ, ಮಾಗಡಿ ರಸ್ತೆ ಪೊಲೀಸರು ದರ್ಶನ್ ಅಲಿಯಾಸ್ ಮುರಡಿ ವಿರುದ್ಧ ವಾರೆಂಟ್ ಜಾರಿಗೊಳಿಸಿದ್ದಾರೆ. ಇದರಂೆ ಕಾಮಾಕ್ಷಿಪಾಳ್ಯ ಪೊಲೀಸರು ವಿಷ್ಣು ಅಲಿಯಾಸ್ ಕೆಂಡ ಮತ್ತು ಲಕ್ಷ್ಮಣ್ ಅಲಿಯಾಸ್ ಲಕ್ಕು ವಿರುದ್ಧ ವಾರೆಂಟ್ ಜಾರಿಗೊಳಿಸಿದ್ದಾರೆ.

ಪಶ್ಚಿಮ ವಿಭಾಗದಲ್ಲಿ 177 ರೌಡಿಗಳು, ದಕ್ಷಿಣ ವಿಭಾಗದಲ್ಲಿ 175, ಉತ್ತರ ವಿಭಾಗದಲ್ಲಿ 254, ಕೇಂದ್ರ ವಿಭಾಗ 90, ಪೂರ್ವ 207, ಆಗ್ನೇಯ ವಿಭಾಗ 160, ಈಶಾನ್ಯ ವಿಭಾಗದಲ್ಲಿ 156, ವೈಟ್‍ಫೀಲ್ಡ್ ವಿಭಾಗದಲ್ಲಿ 125 ರೌಡಿಗಳ ಮನೆಗಳ ಮೇಲೆ ದಾಳಿ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!