ದಿನೇಶ್ ಗುಂಡೂರಾವ್. 
ರಾಜ್ಯ

ಉತ್ತಮ ಗುಣಮಟ್ಟದ ಡಯಾಲಿಸಿಸ್ ಕೇಂದ್ರ: ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಸರ್ಕಾರಿ ಡಯಾಲಿಸಿಸ್ ಕೇಂದ್ರಗಳ ಸ್ಥಿತಿಯನ್ನು ಸುಧಾರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಬೆಂಗಳೂರು: ಸರ್ಕಾರಿ ಡಯಾಲಿಸಿಸ್ ಕೇಂದ್ರಗಳ ಸ್ಥಿತಿಯನ್ನು ಸುಧಾರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಆರೋಗ್ಯ ಆಯುಕ್ತ ಡಿ.ರಂದೀಪ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ ಮತ್ತು ಡಾ.ಮೂರ್ತಿ ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಆಂತರಿಕ ಸಭೆ ನಡೆಸಿದರು.

ಪ್ರಸ್ತುಕ ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಉತ್ತಮ ಸ್ಥಿತಿಯಲ್ಲಿತ್ತ. ಪ್ರತೀ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಗೆ ವೆಚ್ಚಗಳು ಹೆಚ್ಚಾಗಿವೆ. ಟೆಂಡರ್ ಗಳ ಕುರಿತು ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದೇನೆ. ನಿರ್ವಹಣಾ ವೆಚ್ಚ ಹೆಚ್ಚಿರುವುದನ್ನು ಗಮನಿಸಲಾಗಿದೆ. ಹೀಗಾರಿ ಹೊಸ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ಇದರ ಅಡಿಯಲ್ಲಿ ಸುಧಾರಿತ ಗುಣಮಟ್ಟದೊಂದಿಗೆ ವೆಚ್ಚವನ್ನು ಕಡಿಮೆ ಮಾಡಬಹುದು. ಈ ಕೇಂದ್ರಗಳಲ್ಲಿ ಮೂತ್ರಪಿಂಡ ಶಾಸ್ತ್ರಜ್ಞರ ಕೊರತೆಯನ್ನೂ ನಿವಾರಿಸಲಾಗುವುದು ಎಂದು ಗುಂಡೂರಾವ್ ಅವರು ಹೇಳಿದರು.

ಡಯಾಲಿಸಿಸ್ ಕೇಂದ್ರಗಳ ಸ್ಥಿತಿ ಕಳಪೆಯಾಗಿದ್ದು, ಅನೇಕ ಕೇಂದ್ರಗಳಲ್ಲಿನ ಉಪಕರಣಗಳು ನಿಷ್ಕ್ರಿಯವಾಗಿರುವುದರಿಂದ ಮೂತ್ರಪಿಂಡಶಾಸ್ತ್ರಜ್ಞರ ಕೊರತೆಯೂ ಇದೆ ಎಂದು ಇದೇ ಸಂದರ್ಭದಲ್ಲಿ ನೆಫ್ರಾಲಜಿ ವಿಭಾಗದ ನಿರ್ದೇಶಕ ಡಾ.ಕೇಶವ ಮೂರ್ತಿಯವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದ ಅಡಿಯಲ್ಲಿ, ಕರ್ನಾಟಕದಲ್ಲಿ 167 ಕೇಂದ್ರಗಳು ಚಾಲನೆಯಲ್ಲಿವೆ. ವರದಿಗಳ ಪ್ರಕಾರ, 145 ಕೇಂದ್ರಗಳು ಮೂತ್ರಪಿಂಡಶಾಸ್ತ್ರಜ್ಞರ ಮೇಲ್ವಿಚಾರಣೆಯಿಲ್ಲದೆ ನಡೆಯುತ್ತಿವೆ ಎನ್ನಲಾಗಿದೆ.

ಈ ಕೇಂದ್ರಗಳ ಮೇಲೆ ನಿಗಾ ವಹಿಸದಿರುವುದು ಸೇವೆಗಳ ಗುಣಮಟ್ಟದಲ್ಲಿ ಕ್ಷೀಣಿಸಲು ಕಾರಣವಾಗಿದೆ ಎಂದು ಆಯುಕ್ತ ರಂದೀಪ್ ಅವರು ಹೇಳಿದ್ದಾರೆ.

ಹೊಸ ಟೆಂಡರ್ ಬಳಿಕ ಪಿಎಂಎನ್‌ಡಿಪಿ ಪೋರ್ಟಲ್‌ನಲ್ಲಿ ನಡೆಸಿದ ಪ್ರತಿ ಡಯಾಲಿಸಿಸ್‌ನ ವಿವರಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ.  ಅದರ ಆಧಾರದ ಮೇಲೆ ಮಾರಾಟಗಾರರಿಗೆ ಪಾವತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT