ಡಾ. ರಾಜ್ ಕುಮಾರ್ ಅಕಾಡೆಮಿ ಆಯೋಜಿಸಿದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಪಾಲ್ಗೊಂಡರು 
ರಾಜ್ಯ

ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು- ಸಿಎಂ ಸಿದ್ದರಾಮಯ್ಯ

ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಬೆಂಗಳೂರು: ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಅಕಾಡೆಮಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಬಹಳಷ್ಟು ಜನರಿದ್ದಾರೆ. ಅವರಿಗೆ ಶಿಕ್ಷಣದ ಜೊತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಡಾ. ರಾಜ್ ಕುಮಾರ್ ಅವರೊಂದಿಗಿನ ಒಡನಾಟ ನೆನಪಿಸಿಕೊಂಡ ಸಿದ್ದರಾಮಯ್ಯ, ನಮ್ ಕಾಡಿನವರು ಎಂದು ಖುಷಿಯಿಂದ ಕರೆಯುತ್ತಿದ್ದರು. ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ. ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ಮೇರು ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದರು. 

ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್‌ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರ. ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ದೇಶಸೇವೆಯ ಕನಸು ಕಟ್ಟಿಕೊಂಡಿರುವ ಅಸಂಖ್ಯ ಮನಸುಗಳಿಗೆ ಆಸರೆಯಾಗಲಿ ಎಂದು ಹಾರೈಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT