ವಿಕಾಸ ಸೌಧದಲ್ಲಿ ಅಧಿಕೃತ ಕಚೇರಿಯ ಪೂಜೆ ನೆರವೇರಿಸಿ ಆವರಣದಲ್ಲಿ ಸಸಿ ನೆಟ್ಟ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಪಾರದರ್ಶಕ ಮತ್ತು ಹಗರಣ ಮುಕ್ತ ಆಡಳಿತ ನೀಡುತ್ತೇವೆ: ಸಚಿವ ಈಶ್ವರ್ ಖಂಡ್ರೆ

ಪಾರದರ್ಶಕ ಮತ್ತು ಹಗರಣ ಮುಕ್ತ ಆಡಳಿತ ನೀಡುವುದಾಗಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ದಕ್ಷ, ಪ್ರಾಮಾಣಿಕ, ಹಗರಣ ಮುಕ್ತ ಹಾಗೂ ಪಾರದರ್ಶಕ ಆಡಳಿತ ನೀಡಲು ಶ್ರಮಿಸುವುದಾಗಿ ಅವರು ಹೇಳಿದರು.

ಬೆಂಗಳೂರು: ಪಾರದರ್ಶಕ ಮತ್ತು ಹಗರಣ ಮುಕ್ತ ಆಡಳಿತ ನೀಡುವುದಾಗಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ದಕ್ಷ, ಪ್ರಾಮಾಣಿಕ, ಹಗರಣ ಮುಕ್ತ ಹಾಗೂ ಪಾರದರ್ಶಕ ಆಡಳಿತ ನೀಡಲು ಶ್ರಮಿಸುವುದಾಗಿ ಅವರು ಹೇಳಿದರು.

ನಾನು ಜನರ ಪರವಾದ ರೀತಿಯಲ್ಲಿ ಕೆಲಸ ಮಾಡಲು ಮನಸ್ಸು ಹೊಂದಿದವನಾಗಿದ್ದು ಜನರ ಕೆಲಸ ದೇವರ ಕೆಲಸ ಎಂದು ಕೈಗೆತ್ತಿಕೊಳ್ಳುತ್ತೇನೆ. ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಹಲವು ಸವಾಲುಗಳಿವೆ. ಅವುಗಳನ್ನು ನಿವಾರಿಸಿ ಮಹತ್ವದ ಬದಲಾವಣೆ ತರಲು ಶ್ರಮಿಸುತ್ತೇನೆ ಎಂದರು. 

ಪ್ಲಾಸ್ಟಿಕ್ ತ್ಯಾಜ್ಯ, ವಾಯು ಮಾಲಿನ್ಯ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದ ಅವರು, 2024ರ ವೇಳೆಗೆ ಐದು ಪ್ಲಾಸ್ಟಿಕ್ ಮುಕ್ತ ನಗರಗಳ ಜೊತೆಗೆ ಕೆರೆಗಳನ್ನು ಸ್ವಚ್ಛಗೊಳಿಸುವ ಭರವಸೆಯನ್ನು ನೀಡಿದರು. ನಾನು ತುಮಕೂರು, ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಿಗೂ ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!