ಉನ್ನತ ಶಿಕ್ಷಣ ಸಚಿವ ಸುಧಾಕರ್. 
ರಾಜ್ಯ

ಅಭಿಪ್ರಾಯ ಸಂಗ್ರಹದ ಬಳಿಕ ಎನ್ಇಪಿ ಕುರಿತು ಅಂತಿಮ ನಿರ್ಧಾರ: ಸಚಿವ ಸುಧಾಕರ್

ತಜ್ಞರು, ಮಾಜಿ ಕುಲಪತಿಗಳಿಂದ ಸಲಹೆ ಪಡೆದ ಬಳಿಕವೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ತಜ್ಞರು, ಮಾಜಿ ಕುಲಪತಿಗಳಿಂದ ಸಲಹೆ ಪಡೆದ ಬಳಿಕವೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಎನ್‌ಇಪಿ ಕುರಿತು ಪರ ಮತ್ತು ವಿರೋಧದ ಮಾತುಗಳು ಕೇಳಿ ಬರುತ್ತಿವೆ. ಎನ್‌ಇಪಿ ರದ್ದುಪಡಿಸದಂತೆ ಶಿಕ್ಷಣ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ ಕೂಡ ಮನವಿ ಮಾಡಿಕೊಂಡಿದ್ದಾರೆ. ಎನ್‌ಇಪಿ ಉತ್ತಮ ಉಪಕ್ರಮಗಳನ್ನು ಹೊಂದಿದ್ದು ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಿರುವುದರಿಂದ ಅದನ್ನು ರದ್ದುಗೊಳಿಸದಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ವೇಳೆ ಖಂಡಿತವಾಗಿಯೂ ಎಲ್ಲರಿಂದಲೂ ಅಭಿಪ್ರಾಯ ಪಡೆದುಕೊಳ್ಳಲಾಗುವುದು. ಎನ್ಇಪಿ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದರು,

ಯುಯುಸಿಎಂಎಸ್ ಕುರಿತು ಮಾತನಾಡಿ, ಹಲವಾರು ಲೋಪದೋಷಗಳಿರುವುದರಿಂದ ಪೋರ್ಟಲ್ ಬಳಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಉಪಕುಲಪತಿಗಳು ಮನವಿ ಮಾಡಿಕೊಂಡಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್, ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಒಪ್ಪಿಗೆ!

ಕೊನೆಗೂ ತೆರೆದ Bigg Boss ಮನೆ, ರಾತ್ರೋರಾತ್ರಿ ಸ್ಪರ್ಧಿಗಳೂ ವಾಪಸ್! ವರ್ಕ್ ಆಯ್ತು ಕಿಚ್ಚನ ಕರೆ!

Video: ಹಾಡಹಗಲೇ 'ಮಲ್ಲೇಶ್ವರಂ ಪಾರ್ಕ್' ಬೆಂಚ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್: ಸ್ಥಳೀಯರ ಕಿಡಿ!

ಹಂಗೇರಿಯನ್ ಲೇಖಕ ಲಾಸ್ಲೊಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

'ಮತಾಂತರವಾದವರು ಇತರರ ಮತಾಂತರಕ್ಕೆ ಮುಂದಾದರೆ ಕಠಿಣ ಕ್ರಮ': ಗುಜರಾತ್ ಹೈಕೋರ್ಟ್ ಮಹತ್ವದ ನಿರ್ಣಯ!

SCROLL FOR NEXT