ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡುತ್ತಿರುವುದು. 
ರಾಜ್ಯ

ವಿದ್ಯುತ್ ದರ ಏರಿಸಿ 440 ವೋಲ್ಟೇಜ್ ಶಾಕ್ ನೀಡಿದೆ ಹೆಸ್ಕಾಂ: ವಾಣಿಜ್ಯೋದ್ಯಮಿಗಳ ಕಿಡಿ

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಸ್ಥೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಹುಬ್ಬಳ್ಳಿ: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಸ್ಥೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಅಲ್ಲದೆ, ವಿದ್ಯುತ್ ದರ ಏರಿಕೆ ಹಿಂಪಡೆಯಲು ಸರ್ಕಾರಕ್ಕೆ 1 ವಾರ ಗಡವು ನೀಡಿದ್ದು, ಹಿಂಪಡೆಯದಿದ್ದರೆ ಕೈಗಾರಿಕೆಗಳನ್ನು ಬಂದ್​ ಮಾಡಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದೆ.

ವಿದ್ಯುತ್ ದರ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಹುಬ್ಬಳ್ಳಿ-ಧಾರವಾಡ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಏಳು ಕೈಗಾರಿಕಾ ಸಂಘದ ಮುಖ್ಯಸ್ಥರು ನಿನ್ನೆ ಸಭೆ ನಡೆಸಿ, ಚರ್ಚೆ ನಡೆಸಿದರು.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್'ಸಿ)ದ ಅವೈಜ್ಞಾನಿಕ ನಿರ್ಧಾರದಿಂದ ದರ ಏರಿಕೆಯಾಗಿದೆ. ಹೆಸ್ಕಾಂನವರು ಕೇಳಿದ ಶುಲ್ಕಕ್ಕಿಂತ ಕೆಇಆರ್'ಸಿದವರು ಹೆಚ್ಚಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ, ಎಫ್'ಸಿಎ (ಇಂಧನ ಶುಲ್ಕ) ಬದಲಾವಣೆ ಮಾಡಲಾಗಿದ್ದು, ಇದರಿಂದ ಕೂಡ ವಿದ್ಯುತ್ ದರ ಹೆಚ್ಚಾಗಿದೆ. ಪ್ರತೀ ಬಾರಿ 20-50 ಪೈಸೆ ಇರುತ್ತದೆ. ಆದರೆ, ಈ ಬಾರಿ ರೂ.2.55 ಹೆಚ್ಚಿಸಿರುವುದು ಬಹಳ ಹೊಡೆತ ಬಿದ್ದಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಚೇಂಬರ್​ ಆಫ್ ಕಾಮರ್ಸ್​ ಅಧ್ಯಕ್ಷ ವಿನಯ್ ಜವಳಿ ಅವರು ಮಾತನಾಡಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಎಫ್‌ಪಿಪಿಸಿಎಯಲ್ಲಿ ದರ ಏರಿಕೆ ಮಾಡಿರುವುದರಿಂದ ಮಾಸಿಕ ವಿದ್ಯುತ್ ಬಿಲ್‌ ಶೇ.25 ರಿಂದ 50 ರಷ್ಟು ಹೆಚ್ಚಳವಾಗಿದೆ. ಕೇವಲ ಹೆಸ್ಕಾಂ ಮಾತ್ರವಲ್ಲ, ರಾಜ್ಯದಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು ಎಫ್‌ಪಿಪಿಸಿಎ ಅನ್ನು ಹೆಚ್ಚಿಸಿವೆ. ಸಾಮಾನ್ಯವಾಗಿ ಎಫ್‌ಪಿಪಿಸಿಎ ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 50 ಪೈಸೆ ಇರುತ್ತಿತ್ತು. ಆದರೆ ಹೆಸ್ಕಾಂ ಈ ಬಾರಿ ಪ್ರತಿ ಯೂನಿಟ್‌ಗೆ 2.55 ರೂ. ಹೆಚ್ಚಿಸಿದೆ. ತನಗಾಗಿರುವ ನಷ್ಟವನ್ನು ಸರಿದೂಗಿಸಲು ಹೆಸ್ಕಾಂ ಕೈಗಾರಿಕೋದ್ಯಮಿಗಳು ಹಾಗೂ ಸಾಮಾನ್ಯ ಜನರನ್ನು ಶಿಕ್ಷಿಸುತ್ತಿದೆ. ಕೆಇಆರ್'ಸಿನವರು ಮತ್ತೊಮ್ಮೆ ಆದೇಶವನ್ನು ಪರಿಶೀಲಿಸಿ ಜನರಿಗೆ ಹಾಗೂ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಡಬೇಕು. ಈ ಹಿಂದಿನ ವಿದ್ಯುತ್ ಮುಂದುವರೆಸಿಕೊಂಡು ಹೋಗಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT