ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಯುವಕನ ಕತ್ತು ಸೀಳಿದ ಗಾಳಿಪಟದ ದಾರ; ಐದು ದಿನ ನರಳಿ ನರಳಿ ಪ್ರಾಣಬಿಟ್ಟ ಅಮಾಯಕ!

ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ. 5 ದಿನಗಳ ಹಿಂದೆ ಗಾಳಿಪಟದ ದಾರ ಸಿಲುಕಿ ಕುತ್ತಿಗೆ ಸೀಳಿಹೋಗಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಐದು ದಿನಗಳಿಂದ ಸಾವು ಬದುಕಿನೊಂದಿಗೆ ಹೋರಾಟ ನಡೆಸಿದ್ದ ರವಿ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿಯಾಗಿರುವ ರವಿ. ಗದಗ ನಗರದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಳೆದ ಭಾನುವಾರ ಬೈಕ್ ಮೇಲೆ ಹೋಗುವಾಗ ಅಡ್ಡಲಾಗಿದ್ದ ಗಾಳಿಪಟದ ಮಾಂಜಾ ದಾರ ಕತ್ತಿಗೆ ಸಿಲುಕಿದೆ. ಬೈಕ್ ವೇಗಕ್ಕೆ ದಾರ ಯುವಕನ ಕತ್ತು ಸೀಳಿದೆ.

ಕಾರ ಹುಣ್ಣಿಮೆಯೆಂದು ಅವಳಿನಗರದಲ್ಲಿ ಗಾಳಿಪಟ ಹಾರಾಟ ನಡೆಸಲಾಗಿತ್ತು. ಹೀಗಾಗಿ ಎಲ್ಲೆಂದರಲ್ಲೇ ಗಾಳಿಪಟದ ದಾರಗಳು ಸಿಲುಕಿವೆ. ಇದನ್ನು ಗಮನಿಸದೇ ಬೈಕ್‌ಮೇಲೆ ಹೋಗಿದ್ದ ಯುವಕ ರವಿ.

ನಾವು ಪ್ಲಾಸ್ಟಿಕ್ ಗಾಳಿಪಟ ಮತ್ತು ಮಾಂಜಾ ದಾರವನ್ನು ನಿಷೇಧಿಸಿದ್ದೇವೆ. ಆದರೆ  ಹಬ್ಬ ಹರಿದಿನಗಳಲ್ಲಿ ಗದಗಕ್ಕೆ ಬರುವ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ' ಎಂದು ಗದಗ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT