ದಿನೇಶ್ ಗುಂಡೂರಾವ್. 
ರಾಜ್ಯ

ನುಡಿದಂತೆ ನಡೆಯುವವರು ನಾವು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಇಂದಿನಿಂದ ಅನುಷ್ಟಾನವಾಗಲಿದೆ. ನಾವು ಅಧಿಕಾರಕ್ಕೆ ಬಂದ 1ತಿಂಗಳ ಒಳಗೇ ಈ ಯೋಜನೆ ಅನುಷ್ಟಾನವಾಗುತ್ತಿರುವುದು‌ ಸಾರ್ಥಕತೆ ಮೂಡಿಸಿದೆಯ ನಾನು ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡದ ಬಿಜೈನ ಕೆಎಸ್ಆರ್'ಟಿಸಿ ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆಂದು ಹೇಳಿದ್ದಾರೆ.

ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಬಗ್ಗೆ BJPಯವರು ಹಾಗೂ ಕೆಲ ಪಟ್ಟಭಧ್ರ ಹಿತಾಸಕ್ತಿಗಳು‌ ಅಪಪ್ರಚಾರ ನಡೆಸಿದ್ದರು. ಈ ಯೋಜನೆಗಳು ಅನುಷ್ಟಾನವಾಗುವುದೇ ಇಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸಿದ್ದರು. ಆದರೆ, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ.

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಅನುಷ್ಟಾನವಾಗುತ್ತಿರುವುದು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರತೀಕ. ಇದೇ ರೀತಿ 'ಅನ್ನಭಾಗ್ಯ','ಗೃಹಲಕ್ಷ್ಮಿ', 'ಗೃಹಜ್ಯೋತಿ' ಮತ್ತು 'ಯುವನಿಧಿ' ಯೋಜನೆಗಳು ಕೂಡ ಜಾರಿಯಾಗಲಿವೆ. ಈ ಬಗ್ಗೆ ರಾಜಕೀಯ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಈ ಯೋಜನೆಗಳು ಜನರಿಗೆ ತಲುಪುವುದು ಖಚಿತ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT