ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಬಡವರಿಗೆ ಊಟ ವಿತರಿಸಿದ ಕುಟುಂಬಕ್ಕೆ ಹೋಟೆಲ್ ಸಿಬ್ಬಂದಿ ಬೆದರಿಕೆ 

ಎಂಎನ್‌ಸಿಯೊಂದರಲ್ಲಿ ಉಪಾಧ್ಯಕ್ಷರಾಗಿರುವ 46 ವರ್ಷದ ವ್ಯಕ್ತಿ, ಅವರ ತಂದೆ ಮತ್ತು 17 ವರ್ಷದ ಅಪ್ರಾಪ್ತ ಪುತ್ರನಿಗೆ ಸರ್ಜಾಪುರ ರಸ್ತೆಯಲ್ಲಿ ಹೊಸದಾಗಿ ತೆರೆದಿರುವ ಹೊಟೇಲ್‌ನ ಮಾಲೀಕರು ಮತ್ತು ಸಿಬ್ಬಂದಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ. 

ಬೆಂಗಳೂರು: ಎಂಎನ್‌ಸಿಯೊಂದರಲ್ಲಿ ಉಪಾಧ್ಯಕ್ಷರಾಗಿರುವ 46 ವರ್ಷದ ವ್ಯಕ್ತಿ, ಅವರ ತಂದೆ ಮತ್ತು 17 ವರ್ಷದ ಅಪ್ರಾಪ್ತ ಪುತ್ರನಿಗೆ ಸರ್ಜಾಪುರ ರಸ್ತೆಯಲ್ಲಿ ಹೊಸದಾಗಿ ತೆರೆದಿರುವ ಹೊಟೇಲ್‌ನ ಮಾಲೀಕರು ಮತ್ತು ಸಿಬ್ಬಂದಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ. 

ಸರ್ಜಾಪುರ ರಸ್ತೆಯ ಸಲಾರ್‌ಪುರಿಯಾ ಸೆನೋರಿಟಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ದೂರುದಾರ ಗೌರವ್ ಗುಪ್ತಾ ಮಾತನಾಡಿ, ನಾಲ್ಕು ವರ್ಷಗಳಿಂದ ಪ್ರತಿ ಶನಿವಾರ ಸರ್ಜಾಪುರ ರಸ್ತೆಯಲ್ಲಿರುವ ವಿಪ್ರೋ ಕಚೇರಿಯ ಪಕ್ಕದಲ್ಲಿರುವ ಸ್ಲಮ್‌ನಲ್ಲಿರುವ 100ಕ್ಕೂ ಹೆಚ್ಚು ಹಿಂದುಳಿದ ಜನರಿಗೆ ಧ್ಯಾನ್ ಫೌಂಡೇಶನ್ ಉಚಿತ ಆಹಾರವನ್ನು ನೀಡುತ್ತಿದೆ ಎಂದರು.

ಏಪ್ರಿಲ್‌ನಲ್ಲಿ, ಆಹಾರವನ್ನು ವಿತರಿಸುವುದರ ವಿರುದ್ಧ ಹೋಟೆಲ್ ಸಿಬ್ಬಂದಿ ಕುಟುಂಬಕ್ಕೆ ಬೆದರಿಕೆ ಹಾಕಿದರು ಮತ್ತು ಅವರ ವ್ಯಾಪಾರದ ಮೇಲೆ ಪರಿಣಾಮ ಬೀರಬಹುದು ಎಂದು ಆ ಪ್ರದೇಶದಿಂದ ತಮ್ಮ ವಾಹನವನ್ನು ಬೇರೆಡೆಗೆ ಸ್ಥಳಾಂತರಿಸಿದರು. ಮೇ ತಿಂಗಳಲ್ಲಿ, ಹೋಟೆಲ್ ಆಡಳಿತವು ಅವರ ತಂದೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿತು. ಅವರ ಮಗನನ್ನು ನಿಂದಿಸಲಾಯಿತು ಮತ್ತು ಕುಟುಂಬಕ್ಕೆ ಬೆದರಿಕೆಯೊಡ್ಡಿದ್ದರು. 

ಬೆಳ್ಳಂದೂರು ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಇಬ್ಬರು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎನ್‌ಸಿಆರ್ ದಾಖಲಿಸುವ ಮೂಲಕ ಹೋಟೆಲ್ ಆಡಳಿತ ಮಂಡಳಿ ವಿರುದ್ಧ ಎಚ್ಚರಿಕೆ ನೀಡಿದರು. ಶನಿವಾರ ಮತ್ತೆ ಘಟನೆ ನಡೆದಿದ್ದು, ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಗುಪ್ತಾ ಅವರ ಕುಟುಂಬವು ಕಳೆದ ತಿಂಗಳು ನಮ್ಮನ್ನು ಸಂಪರ್ಕಿಸಿತ್ತು ಮತ್ತು ಎನ್‌ಸಿಆರ್ ಅನ್ನು ನೋಂದಾಯಿಸಲಾಗಿದೆ. ಆದರೆ, ಶನಿವಾರ ಮತ್ತೆ ಸಮಸ್ಯೆ ಉದ್ಭವಿಸಿದೆ. ಎರಡೂ ಕಡೆಯವರನ್ನು ಠಾಣೆಗೆ ಕರೆಸಲಾಯಿತು. ಯಾವುದೇ ಸಮಾಜ ಸೇವೆಯ ಕಾರ್ಯವನ್ನು ತಡೆಯುವ ಅಧಿಕಾರ ಹೋಟೆಲ್ ಮಾಲೀಕರಿಗೆ ಇಲ್ಲವಾದ್ದರಿಂದ ಸಮಸ್ಯೆ ಸೃಷ್ಟಿಸಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

'ತಮ್ಮ ವ್ಯಾಪಾರದ ಮೇಲೆ ಪರಿಣಾಮ ಬೀರುವುದರಿಂದ ಹೋಟೆಲ್ ಆವರಣದಿಂದ 20 ಮೀಟರ್ ದೂರದಲ್ಲಿ ಆಹಾರವನ್ನು ನೀಡಬೇಕು ಎಂದು ಹೋಟೆಲ್ ಆಡಳಿತ ಮಂಡಳಿ ಬಯಸಿದೆ. ಈ ಸಮಸ್ಯೆಯನ್ನು ತಮ್ಮಲ್ಲೇ ಬಗೆಹರಿಸಿಕೊಳ್ಳಬೇಕು' ಎಂದು ಬೆಳ್ಳಂದೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

SCROLL FOR NEXT