ನಳಿನ್ ಕುಮಾರ್ ಕಟೀಲ್. 
ರಾಜ್ಯ

ಯಾರೂ ವಿದ್ಯುತ್‌ ಬಿಲ್‌ ಕಟ್ಟಬೇಡಿ: ನಳಿನ್‌ ಕುಮಾರ್‌ ಕಟೀಲ್‌ ಕರೆ

ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.

ಮಂಗಳೂರು: ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಲವಾರು ಷರತ್ತುಗಳನ್ನು ಮುಂದಿಟ್ಟಿದ್ದು, ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಭರವಸೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ‘ಉಚಿತ ವಿದ್ಯುತ್‌ ಭರವಸೆ ಸುಳ್ಳಾಗಿದ್ದು, ಜನರು ಬಿಲ್‌ ಕಟ್ಟಬಾರದು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದರೆ ಬಿಜೆಪಿ ಜನರ ಪರ ನಿಂತು ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.

ಯೋಜಿತವಲ್ಲದ ಗ್ಯಾರಂಟಿ ಯೋಜನೆಗಳಿಂದ ಲಾಭ ಪಡೆಯಲು ಜನರು ಇನ್ನೂ ಕಾಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಸೊಸೆ ಮತ್ತು ಅತ್ತೆಯ ನಡುವೆ ಜಗಳಕ್ಕೆ ಕಾರಣವಾಗಿದೆ. ಎಲ್ಲರಿಗೂ ಎಲ್ಲಾ ಯೋಜನೆಗಳು ಉಚಿತ ಎಂದು ಹೇಳಿದ ಸಿದ್ದರಾಮಯ್ಯ ಈಗ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಯೋಜನೆಗೆ ಹೊಸ ಮಾರ್ಗಸೂಚಿಗಳನ್ನು ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡದಲ್ಲಿ ಮಹಿಳೆಯರ ದೊಡ್ಡ ಗುಂಪು ಖಾಸಗಿ ಬಸ್‌ಗಳನ್ನು ಬಳಕೆ ಮಾಡುತ್ತಾರೆ. ಹೀಗಾಗಿ ಅವರಿಗೆ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಸರ್ಕಾರ ಜಾರಿಗೆ ತರದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಸರ್ಕಾರಕ್ಕೇ ತನ್ನ ಬಗ್ಗೆ ಗ್ಯಾರಂಟಿ ಇಲ್ಲ, ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಸಮಯವೇ ಹೇಳುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT