ನಳಿನ್ ಕುಮಾರ್ ಕಟೀಲ್. 
ರಾಜ್ಯ

ಯಾರೂ ವಿದ್ಯುತ್‌ ಬಿಲ್‌ ಕಟ್ಟಬೇಡಿ: ನಳಿನ್‌ ಕುಮಾರ್‌ ಕಟೀಲ್‌ ಕರೆ

ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.

ಮಂಗಳೂರು: ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಲವಾರು ಷರತ್ತುಗಳನ್ನು ಮುಂದಿಟ್ಟಿದ್ದು, ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಭರವಸೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ‘ಉಚಿತ ವಿದ್ಯುತ್‌ ಭರವಸೆ ಸುಳ್ಳಾಗಿದ್ದು, ಜನರು ಬಿಲ್‌ ಕಟ್ಟಬಾರದು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದರೆ ಬಿಜೆಪಿ ಜನರ ಪರ ನಿಂತು ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.

ಯೋಜಿತವಲ್ಲದ ಗ್ಯಾರಂಟಿ ಯೋಜನೆಗಳಿಂದ ಲಾಭ ಪಡೆಯಲು ಜನರು ಇನ್ನೂ ಕಾಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಸೊಸೆ ಮತ್ತು ಅತ್ತೆಯ ನಡುವೆ ಜಗಳಕ್ಕೆ ಕಾರಣವಾಗಿದೆ. ಎಲ್ಲರಿಗೂ ಎಲ್ಲಾ ಯೋಜನೆಗಳು ಉಚಿತ ಎಂದು ಹೇಳಿದ ಸಿದ್ದರಾಮಯ್ಯ ಈಗ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಯೋಜನೆಗೆ ಹೊಸ ಮಾರ್ಗಸೂಚಿಗಳನ್ನು ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡದಲ್ಲಿ ಮಹಿಳೆಯರ ದೊಡ್ಡ ಗುಂಪು ಖಾಸಗಿ ಬಸ್‌ಗಳನ್ನು ಬಳಕೆ ಮಾಡುತ್ತಾರೆ. ಹೀಗಾಗಿ ಅವರಿಗೆ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಸರ್ಕಾರ ಜಾರಿಗೆ ತರದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಸರ್ಕಾರಕ್ಕೇ ತನ್ನ ಬಗ್ಗೆ ಗ್ಯಾರಂಟಿ ಇಲ್ಲ, ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಸಮಯವೇ ಹೇಳುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT