ಕೆಎನ್ ರಾಜಣ್ಣ 
ರಾಜ್ಯ

ತುಮಕೂರು: ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆಎನ್ ರಾಜಣ್ಣ ಕಣ್ಣಿಗೆ ಗಾಯ

ಭಾನುವಾರ ಬೆಳಗ್ಗೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ. ಶಕ್ತಿ ಯೋಜನೆ ಉದ್ಘಾಟನೆಗೆಂದು ತುಮಕೂರಿನಿಂದ ಕುಣಿಗಲ್ ಮೂಲಕ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕುಣಿಗಲ್: ಭಾನುವಾರ ಬೆಳಗ್ಗೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ.

ಸಚಿವ ರಾಜಣ್ಣ ಅವರು ಶಕ್ತಿ ಯೋಜನೆ ಉದ್ಘಾಟನೆಗೆಂದು ತುಮಕೂರಿನಿಂದ ಕುಣಿಗಲ್ ಮೂಲಕ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದ ಬಳಿ ಸಚಿವ ರಾಜಣ್ಣ ಅವರ ಕಟ್ಟಾ ಬೆಂಬಲಿಗರು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದರು. ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಸಂಭ್ರಮದ ವಾತಾವರಣದ ಅಂಗವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಪಟಾಕಿ ಸಿಡಿಸಲಾಯಿತು. ದುರದೃಷ್ಟವಶಾತ್, ಪಟಾಕಿಯ ಕಿಡಿ ಆಕಸ್ಮಿಕವಾಗಿ ಸಚಿವ ರಾಜಣ್ಣ ಅವರ ಬಲಗಣ್ಣಿಗೆ ತಗುಲಿದೆ.

ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ, ಸಹಕಾರ ಸಚಿವರು ತಮ್ಮ ನಿಗದಿತ ಚಟುವಟಿಕೆಗಳನ್ನು ಮುಂದುವರೆಸಲು ಹಾಸನಕ್ಕೆ ತೆರಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು